ಶಿವಮೊಗ್ಗ, 25 ಮೇ (ಹಿ.ಸ.) :
ಆ್ಯಂಕರ್ : ಮುಂಗಾರುಪೂರ್ವ ಮಳೆಗೆ ತುಂಗಾ ಆಣೆಕಟ್ಟು ಭರ್ತಿಯಾಗಿದ್ದು, 5 ಕ್ರಸ್ಟ್ ಗೇಟುಗಳ ಮೂಲಕ ನದಿಗೆ 2 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಇದು ರಾಜ್ಯದಲ್ಲಿಯೇ ಪ್ರಥಮವಾಗಿ ತುಂಬಿರುವ ಅಣೆಕಟ್ಟಾಗಿದೆ.
ಆಣೆಕಟ್ಟೆಗೆ 7,500 ಕ್ಯೂಸೆಕ್ ನೀರು ಒಳ ಹರಿವು ಇರುವ ಕಾರಣ ಐದು ಕ್ರಸ್ಟ್ ಗೇಟ್ಗಳ ಮೂಲಕ 2 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇನ್ನೂ ಒಂದು ವಾರದಲ್ಲಿ ಮುಂಗಾರು ಮಳೆ ಪ್ರಾರಂಭವಾಗಲಿದೆ. ಆಗ ಡ್ಯಾಂನಿಂದ ಇನ್ನಷ್ಟು ನೀರು ನದಿಗೆ ಬಿಡುವ ಸಾಧ್ಯತೆ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa