ಸಕಲೇಶಪುರ, 25 ಮೇ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇದರ ನಡುವೆ ಕಾಡಾನೆಗಳ ಹಾವಳಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಜಿಲ್ಲೆಯ ಸಕಲೇಶಪುರ ತಾಲೂಕಿನ ಉದೇವಾರ ಗ್ರಾಮದಲ್ಲಿ ಮಳೆಯ ನಡುವೆಯೂ ಕಾಡಾನೆ ಆಹಾರ ಅರಸಿ ಮನೆಯೊಂದರ ಸಮೀಪ ಬಂದಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ಉಂಟಾಗಿದೆ.
ಸದಾ ಒಂಟಿಯಾಗಿ ಸಂಚರಿಸುತ್ತಿದ್ದ ಕಾಡಾನೆಯೊಂದು ಇಂದು ಮರಿಯಾನೆ ಜೊತೆ ಕಾಣಿಸಿಕೊಂಡಿದೆ. ಕಾಡಾನೆ ಪ್ರತ್ಯಕ್ಷವಾದ ವಿಚಾರ ತಿಳಿದು ಸಕಲೇಶಪುರ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ದಿನೇಕೆರೆ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa