ಬಳ್ಳಾರಿ, 26 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಪೂರ್ವದಲ್ಲಿ ಉತ್ತಮ ಮಳೆಯಾಗುತ್ತಿದೆ, ಕೃಷಿ ಚಟುವಟಿಕೆಗಳು ಚುರುಕಾಗಿವೆ. ಮಳೆಯು ರೈತ ಸಮುದಾಯದಲ್ಲಿ ಮಂದಹಾಸ ಮೂಡಿಸಿದೆ. ಇದಕ್ಕೆ ಪೂರಕವಾಗಿ ಕೃಷಿ ಇಲಾಖೆಯು ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಪೂರೈಸಲು ಸಜ್ಜಾಗಿದೆ.
ಉತ್ತಮ ಮಳೆ ಹಿನ್ನಲೆ ರೈತರು ಕೃಷಿ ಭೂಮಿ ಹದಗೊಳಿಸುವ ಕಾರ್ಯಗಳಲ್ಲಿ ತೊಡಗಿದ್ದಾರೆ. ರಂಟೆ-ಕುಂಟೆ ಹೊಡೆಯುವುದು, ರೋಟವೇಟರ್, ಎತ್ತುಗಳ ನೇಗಲು ಹೊಡೆಯುವುದು.
ಜಿಲ್ಲೆಯಲ್ಲಿ ವಾರ್ಷಿಕ 599.5 ಮಿ.ಮೀ ವಾಡಿಕೆ ಮಳೆಯಿದ್ದು, ಕಳೆದ ವರ್ಷ ಮೇ 20ರವರೆಗೆ 53.6 ಮಿ.ಮೀ ಮಳೆಯಾಗಿದೆ. ಪ್ರಸ್ತುತ ವರ್ಷ 88.4 ಮಿ.ಮೀ ಮಳೆಯಾಗಿ ಶೇ.64ರಷ್ಟು ಮಳೆ ಹೆಚ್ಚಾಗಿ ಸುರಿದಿದೆ.
ಮುಂಗಾರು ಹಂಗಾಮಿಗೆ ಜಿಲ್ಲೆಯಲ್ಲಿ 1,63,753 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುವ ಗುರಿ ಹೊಂದಿದ್ದು, ಭತ್ತ 89,000 ಹೆ., ಮೆಕ್ಕೆಜೋಳ 20,000 ಹೆ., ಹತ್ತಿ 35,000 ಹೆ., ತೊಗರಿ 4,500 ಹೆ., ಜೋಳ 5,000 ಹೆ., ಶೇಂಗ 2,500 ಹೆ., ತೃಣಧಾನ್ಯಗಳು 2,300 ಹೆ., ಸೂರ್ಯಕಾಂತಿ 1,000 ಹೆ., ಮತ್ತು ಕಬ್ಬು 1000 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುವ ನಿರೀಕ್ಷೆಯಿದೆ.
ಕೃಷಿ ಇಲಾಖೆ ಜಿಲ್ಲೆ 13 ರೈತ ಸಂಪರ್ಕ ಕೇಂದ್ರ ಮತ್ತು 02 ಹೆಚ್ಚುವರಿ ಕೇಂದ್ರ ಸೇರಿ ಒಟ್ಟು 15 ಕೇಂದ್ರಗಳ ಮೂಲಕ ವಿವಿಧ ಬೆಳೆಯ ಬಿತ್ತನೆ ಬೀಜಗಳನ್ನು ಸಹಾಯಧನದಡಿ ವಿತರಿಸಲು ವ್ಯವಸ್ಥೆ ಮಾಡಿಕೊಂಡಿದೆ.
ಜಿಲ್ಲೆಯಲ್ಲಿ ಬೀಜ ಬಿತ್ತನೆ ಹಾಗೂ ರಸಗೊಬ್ಬರದ ದಾಸ್ತಾನು ಸಮರ್ಪಕವಾಗಿದ್ದು, ರೈತರು ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಆಭಾವದ ಬಗ್ಗೆ ಯಾವುದೇ ಆಟಕ್ಕೆ ತೆಗೆದುಕೊಳ್ಳುವ ಅಗತ್ಯವಿಲ್ಲ.
ಮುಂಗಾರು ಹಂಗಾಮಿಗೆ ಒಟ್ಟು 1,08,100 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆಯಿದ್ದು, ಪ್ರಸ್ತುತ 40,228 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ. ಹಂತ ಹಂತವಾಗಿ ಬೇಡಿಕೆಗೆ ಅನುಗುಣವಾಗಿ ಉಳಿದ ರಸಗೂಬ್ಬರ ಕಾಲಕಾಲಕ್ಕೆ ಸರಬರಾಜು ಆಗಲಿದೆ. ಜಿಲ್ಲೆಗೆ ಮುಂಗಾರು ಹಂಗಾಮಿನಲ್ಲಿ ಒಟ್ಟು 11766 ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆಯಿದೆ, 11800 ಕ್ವಿಂಟಾಲ್ ಲಭ್ಯವಿದೆ.
ಜಿಲ್ಲೆಯಲ್ಲಿ ಕೃಷಿ ಪರಿಕರಗಳ ಪರಿವೀಕ್ಷರ ತಂಡಗಳನ್ನು ಬಿತ್ತನೆ ಬೀಜಗಳು, ರಸಗೊಬ್ಬರಗಳು ಮತ್ತು ಕೀಟನಾಶಕಗಳ ಗುಣಮಟ್ಟ ಮತ್ತು ಬೆಲೆ ನಿಯಂತ್ರಣಕ್ಕೆ ಕ್ರಮವಹಿಸಲಾಗಿದೆ.
ಬೀಜಗಳು, ರಸಗೊಬ್ಬರ ಮತ್ತು ಕೀಟನಾಶಕಗಳನ್ನೇ ಮಾರಾಟ ಮಾಡಲು ಕಾನೂನು ರೀತ್ಯ ಕೃಷಿ ಕಠಿಣ ಕ್ರಮ ನಡೆಯುತ್ತಿರುವ.
*ರಸಗೊಬ್ಬರ ಬೇಡಿಕೆ (ಏಪ್ರಿಲ್ ನಿಂದ ಸೆಪ್ಟೆಂಬರ್ ವರೆಗೆ) ಮತ್ತು ದಾಸ್ತಾನು (ಮೇ 20 ರಂತೆ):*
ಡಿಎಪಿ: 15,237 ಮೆಟ್ರಿಕ್ ಟನ್ ಬೇಡಿಕೆ ಇತ್ತು, 2735.9 ಮೆಟ್ರಿಕ್ ಟನ್ ದಾಸ್ತಾನಿದೆ.
ಎಂಒಪಿ: 2,293 ಮೆಟ್ರಿಕ್ ಟನ್ ಬೇಡಿಕೆ ಇದೆ, 2615.2 ಮೆಟ್ರಿಕ್ ಟನ್ ದಾಸ್ತಾನಿದೆ.
ಕಾಂಪ್ಲೆಕ್ಸ್: 45,580 ಮೆಟ್ರಿಕ್ ಟನ್ ಬೇಡಿಕೆ ಇದೆ, 20880.9 ಮೆಟ್ರಿಕ್ ಟನ್ ದಾಸ್ತಾನಿದೆ.
ಯೂರಿಯಾ: 44,350 ಮೆಟ್ರಿಕ್ ಟನ್ ಬೇಡಿಕೆ ಇದೆ, 13,491.8 ಮೆಟ್ರಿಕ್ ಟನ್ ದಾಸ್ತಾನಿದೆ.
ಎಸ್ಎಸ್ಪಿ: 542 ಮೆಟ್ರಿಕ್ ಟನ್ ಬೇಡಿಕೆ ಇದೆ, 504.2 ಮೆಟ್ರಿಕ್ ಟನ್ ದಾಸ್ತಾನಿದೆ.
ಒಟ್ಟು: 1,08,102 ಮೆಟ್ರಿಕ್ ಟನ್ ಬೇಡಿಕೆ ಇದ್ದು, 40228.3 ಮೆಟ್ರಿಕ್ ಟನ್ ದಾಸ್ತಾನಿದೆ.
*ಬಿತ್ತನೆ ಬೀಜ ಬೇಡಿಕೆ ಮತ್ತು ದಾಸ್ತಾನು:*
ಭತ್ತ: 4,000 ಕ್ವಿಂಟಲ್ ಬೇಡಿಕೆ ಇದ್ದು, 4,300 ಕ್ವಿಂಟಾಲ್ ದಾಸ್ತಾನಿದೆ.
ಮೆಕ್ಕೆಜೋಳ: 3,600 ಕ್ವಿಂಟಲ್ ಬೇಡಿಕೆ ಇದ್ದು, 4,000 ಕ್ವಿಂಟಲ್ ದಾಸ್ತಾನಿದೆ.
ತೊಗರಿ: 660 ಕ್ವಿಂಟಲ್ ಬೇಡಿಕೆ ಇದ್ದು, 660 ಕ್ವಿಂಟಲ್ ದಾಸ್ತಾನಿದೆ.
ನೆಲಕಡಲೆ: 2,800 ಕ್ವಿಂಟಲ್ ಬೇಡಿಕೆ ಇದ್ದು, 3,000 ಕ್ವಿಂಟಲ್ ದಾಸ್ತಾನಿದೆ.
ಜೋಳ: 210 ಕ್ವಿಂಟಲ್ ಬೇಡಿಕೆ ಇದ್ದು, 210 ಕ್ವಿಂಟಾಲ್ ದಾಸ್ತಾನಿದೆ.
ಒಟ್ಟು 11,766 ಕ್ವಿಂಟಲ್ ಬೇಡಿಕೆ ಇದ್ದು, 11,800 ಕ್ವಿಂಟಲ್ ದಾಸ್ತಾನಿದೆ.
ರೈತರು ಅಧಿಕೃತ ಪರಿಕರ ಮಾರಾಟಗಾರರಿಂದ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮತ್ತು ಇತರ ಕೃಷಿ ಪರಿಕರಗಳನ್ನು ಖರೀದಿಸಬೇಕು.
- ಟಿ.ಸೋಮಸುಂದರ್, ಜಂಟಿ ಕೃಷಿ ನಿರ್ದೇಶಕ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್