ಬೆಂಗಳೂರು, 26 ಮೇ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಮೆಟ್ರೋ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳಲ್ಲಿ ಸರ್ವಿಸ್ ರಸ್ತೆಗಳನ್ನು ಮುಖ್ಯ ರಸ್ತೆಗಳ ಜೊತೆ ಸಂಪರ್ಕ ಕಲ್ಪಿಸಿ, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ನಿರ್ಧರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಹೆಬ್ಬಾಳ ಜಂಕ್ಷನ್ನಿಂದ ಸಿಲ್ಕ್ ಬೋರ್ಡ್ವರೆಗಿನ ಮೆಟ್ರೋ ಮಾರ್ಗದಲ್ಲಿ ಬರುವ ಮಹದೇವಪುರ ಹಾಗೂ ಮಾರತಹಳ್ಳಿ ಮೇಲ್ಸೇತುವೆ ಬಳಿ ಪರಿಶೀಲನೆ ನಡೆಸಿ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa