ಬಳ್ಳಾರಿ : ಮೂಲಭೂತ ಸೌಲಭ್ಯಗಳಿಗಾಗಿ ಪಾಲಿಕೆ ಮುಂದೆ ಪ್ರತಿಭಟನೆ
ಬಳ್ಳಾರಿ, 26 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿ ನಗರದ ಕುಡಿಯುವ ನೀರು, ಒಳ ಮತ್ತು ಹೊರ ಚರಂಡಿ, ಸರ್ವಕಾಲಿಕ ರಸ್ತೆಗಳ ನಿರ್ಮಾಣ ಸೇರಿ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಬಳ್ಳಾರಿ ನಾಗರಿಕ ಹೋರಾಟ ಸಮಿತಿಯು ಸೋಮವಾರ ಬೆಳಗ್ಗೆ ಮಹಾನಗರ ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು.
ಬಳ್ಳಾರಿ : ಮೂಲಭೂತ ಸೌಲಭ್ಯಗಳಿಗಾಗಿ ಪಾಲಿಕೆ ಮುಂದೆ ಪ್ರತಿಭಟನೆ


ಬಳ್ಳಾರಿ : ಮೂಲಭೂತ ಸೌಲಭ್ಯಗಳಿಗಾಗಿ ಪಾಲಿಕೆ ಮುಂದೆ ಪ್ರತಿಭಟನೆ


ಬಳ್ಳಾರಿ : ಮೂಲಭೂತ ಸೌಲಭ್ಯಗಳಿಗಾಗಿ ಪಾಲಿಕೆ ಮುಂದೆ ಪ್ರತಿಭಟನೆ


ಬಳ್ಳಾರಿ, 26 ಮೇ (ಹಿ.ಸ.) :

ಆ್ಯಂಕರ್ : ಬಳ್ಳಾರಿ ನಗರದ ಕುಡಿಯುವ ನೀರು, ಒಳ ಮತ್ತು ಹೊರ ಚರಂಡಿ, ಸರ್ವಕಾಲಿಕ ರಸ್ತೆಗಳ ನಿರ್ಮಾಣ ಸೇರಿ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಬಳ್ಳಾರಿ ನಾಗರಿಕ ಹೋರಾಟ ಸಮಿತಿಯು ಸೋಮವಾರ ಬೆಳಗ್ಗೆ ಮಹಾನಗರ ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು.

ಬಳ್ಳಾರಿ ನಾಗರಿಕ ಹೋರಾಟ ಸಮಿತಿಯ ಸಂಚಾಲಕ ಸೋಮಶೇಖರ ಗೌಡ ಅವರು ಪ್ರತಿಭಟನೆಯ ನೇತೃತ್ವ ವಹಿಸಿ, ಬಳ್ಳಾರಿ ಕುಡಿಯುವ ನೀರಿನ ಚರಂಡಿ ನೀರು ಬೆರೆತು ಅನೇಕರ ಆರೋಗ್ಯ ಹದಗೆಡುತ್ತಿದೆ. ಈ ಸಮಸ್ಯೆಯನ್ನು ತುರ್ತಾಗಿ ಪರಿಹರಿಸಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಹೊರ ಚರಂಡಿಗಳಲ್ಲಿ ತುಂಬಿರುವ ಹೂಳನ್ನು ತಕ್ಷಣವೇ ತೆಗೆದು, ಮಳೆ ನೀರು ಸರಾಗವಾಗಿ ಸಾಗಲು ಪಡೆಯಬೇಕು. ಸಣ್ಣ ಮಳೆ ಬಂದರೂ ರಸ್ತೆಗಳಲ್ಲಿ ಹೊಂಡಗಳು ನಿರ್ಮಾಣವಾಗುವುದನ್ನು ತಪ್ಪಿಸಬೇಕು ಎಂದು ಅವರು ಹೇಳಿದರು.

ಬಳ್ಳಾರಿ ಮಹಾನಗರ ಪಾಲಿಕೆ ಅನವಶ್ಯಕವಾಗಿ - ಅಪ್ರಸ್ತುತವಾಗಿ ನಡೆಯುತ್ತಿರುವ ವೃತ್ತಗಳ ನಿರ್ಮಾಣ, ಧ್ವಂಸ ಮತ್ತು ಪುನರ್ ನಿರ್ಮಾಣದಿಂದ ಸಾರ್ವಜನಿಕರ ಹಣದ ದುಂದುವೆಚ್ಚವಾಗುತ್ತಿದೆ. ಇದರಿಂದ, ಕಾಮಗಾರಿಯ ಧೂಳಿನಿಂದ ಸಾರ್ವಜನಿಕರ ಆರೋಗ್ಯ – ರಸ್ತೆ ಸುರಕ್ಷತೆ ಇಲ್ಲ. ಕಾರಣ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕಟ್ಟಡ ಹಾಳು ಮಾಡುವ ಬದಲು, ಸುಧಾರಣೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ಬಳ್ಳಾರಿ ನಾಗರಿಕ ಹೋರಾಟ ಸಮಿತಿ, ಡಾ. ಎನ್. ಪ್ರಮೋದ್, ಶಾಂತಾ, ನಾಗರತ್ನ, ಸುರೇಶ್, ಅಂತೋನಿ, ವಿದ್ಯಾ, ವಿವಿಧ ಸಂಘಟನೆಗಳ ಮುಖ್ಯಸ್ಥರು, ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande