ಕಲಬುರಗಿ, 26 ಮೇ (ಹಿ.ಸ.) :
ಆ್ಯಂಕರ್ : ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಖಾಸಗಿ ವ್ಯಕ್ತಿಯೊಬ್ಬರು ನೀಡಿದ ದೂರಿನನ್ವಯ ಎಫ್ಐಆರ್ ದಾಖಲಿಸಲಾಗಿದೆ.
ಮೇ 24 ರಂದು ಕಲಬುರಗಿಯಲ್ಲಿ ನಡೆದ ಬಿಜೆಪಿ ಮುಖಂಡರ ಪ್ರತಿಭಟನಾ ರ್ಯಾಲಿಯ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ನೀಡಿದ ವಿವಾದಿತ ಹೇಳಿಕೆಗಳು ಈ ಪ್ರಕರಣಕ್ಕೆ ಕಾರಣವಾಗಿದೆ. ಅವರು ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರ ಕುರಿತು ಪಾಕಿಸ್ತಾನದಿಂದ ಬಂದಿರಬೇಕು ಎಂದು ಹೇಳಿಕೆ ನೀಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದೇ ರ್ಯಾಲಿಯಲ್ಲಿ ದಲಿತ ಸಮುದಾಯದ ಎಎಸ್ಪಿ ಮಹೇಶ್ ಮೇಘಣ್ಣವರ್ ಹಾಗೂ ಸಿಪಿಐ ಚಂದ್ರಶೇಖರ ವಿರುದ್ಧ ನಿಂದನಾತ್ಮಕ ಹೇಳಿಕೆಗಳನ್ನು ನೀಡಿರುವ ಆರೋಪವೂ ಕೇಳಿ ಬಂದಿದೆ. ಅಲ್ಲದೇ ಪರಿಶಿಷ್ಟ ಸಮುದಾಯವನ್ನು ಅವಹೇಳನ ಮಾಡಿರುವ ಬಗ್ಗೆ ಕೂಡ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಕುರಿತಂತೆ ಸ್ಟೇಷನ್ ಬಜಾರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Samarth biral