ಛಲವಾದಿ ವಿರುದ್ಧ ಸಿಡಿದ್ದೆದ್ದ ದಲಿತ ಸಮಾಜ : ಮೇ 31ಕ್ಕೆ ಹೋರಾಟ
ಕಲಬುರಗಿ, 26 ಮೇ (ಹಿ.ಸ) : ಆ್ಯಂಕರ್ : ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿ, ಹೀಯಾಳಿಸಿ ಅಸಂವಿಧಾನಿಕವಾಗಿ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿಯ ವಿಧಾನ ಪರಿಷತ್ ಸದಸ್ಯತ್ವ ಸ್ಥಾನವನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕಲಬುರಗಿ ನಾಗರಿಕ ಹೋರಾಟ ಸಮಿತಿಯಿಂದ ಇದೇ 31ರಂದು ನಗರದ
ಛಲವಾದಿ ವಿರುದ್ಧ ಸಿಡಿದ್ದೆದ್ದ ದಲಿತ ಸಮಾಜ:ಮೇ 31ಕ್ಕೆ ಹೋರಾಟ


ಕಲಬುರಗಿ, 26 ಮೇ (ಹಿ.ಸ) :

ಆ್ಯಂಕರ್ : ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿ, ಹೀಯಾಳಿಸಿ ಅಸಂವಿಧಾನಿಕವಾಗಿ ಮಾತನಾಡಿದ ಛಲವಾದಿ ನಾರಾಯಣ ಸ್ವಾಮಿಯ ವಿಧಾನ ಪರಿಷತ್ ಸದಸ್ಯತ್ವ ಸ್ಥಾನವನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕಲಬುರಗಿ ನಾಗರಿಕ ಹೋರಾಟ ಸಮಿತಿಯಿಂದ ಇದೇ 31ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಮುಖಂಡ ಡಾ. ಡಿ.ಜಿ.ಸಾಗರ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ನಗರದ ಜಗತ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಈ ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳು, ಹಿಂದುಪರ ಸಂಘಟನೆಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಸುಮಾರು 10ರಿಂದ 15 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ನಾರಾಯಣಸ್ವಾಮಿ ಒಬ್ಬ ಜವಾಬ್ದಾರಿತ ಸ್ಥಾನದಲ್ಲಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಾಯಿ ಎಂದು ಸಂಭೋದಿಸಿರುವುದು ಇವರ ಬೌದ್ಧಿಕ ಮಟ್ಟ ಹಾಗೂ ಸಂಸ್ಕೃತಿ ಎಂತದು ಎಂದು ತೋರಿಸುತ್ತದೆ ಎಂದರು.

ಇಂಥ ಅನಾಗರೀಕ ಮತ್ತು ಯೋಗ್ಯವಲ್ಲದ ವ್ಯಕ್ತಿಯನ್ನು ವಿಧಾನ ಪರಿಷತ್ ಸ್ಥಾನದಲ್ಲಿ ಮುಂದುವರಿಸುತ್ತಿರುವ ಬಿಜೆಪಿಗೆ ನಾಚಿಕೆಯಾಗಬೇಕೆಂದು ಬಿಜೆಪಿ ಹೈಕಮಾಂಡ್ ವಿರುದ್ಧ ಹರಿಹಾಯ್ದ ಅವರು, ಮಲ್ಲಿಕಾರ್ಜುನ್ ಖರ್ಗೆ ಅವರ ಗರಡಿಯಲ್ಲಿ ಬೆಳೆದು ಹುದ್ದೆಗಳನ್ನು, ಅಧಿಕಾರವನ್ನು ಅನುಭವಿಸಿ ಉಂಡ ಮನೆಗೆ ದ್ರೋಹ ಬಗೆದ ಅವಿವೇಕಿ ನಾರಾಯಣಸ್ವಾಮಿ ಅವರು ಬಿಜೆಪಿ ಮತ್ತು ಆರ್ ಎಸ್ ಎಸ್ ಗುಲಾಮಗಿರಿ ಮಾಡುತ್ತ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರ ರಾಜಕೀಯ ಬೆಳವಣಿಗೆಯನ್ನು ಸಹಿಸದೆ ಅವರ ಕುಟುಂಬವನ್ನು ಗುರಿಯಾಗಿಸಿಕೊಂಡು ಅವರನ್ನು ವೈಯಕ್ತಿಕವಾಗಿ ನಿಂದನೆ ಮಾಡಿ ರಾಜಕೀಯ ತೇಜೋವಧೆಗೆ ಮುಂದಾಗಿದ್ದು ನಾಚಿಕೆಗೇಡು ಸಂಗತಿ ಎಂದರು.

ನಾರಾಯಣಸ್ವಾಮಿ ಅವರ ಧ್ವನಿಯ ಹಿಂದೆ ಬಿಜೆಪಿ ಮತ್ತು ಆರ್ ಎಸ್ ಎಸ್ ಕೆಲಸ ಮಾಡುತ್ತಿದೆ ಎಂಬುದು ಚಲವಾದಿ ನಾರಾಯಣಸ್ವಾಮಿಯ ತಲೆಯ ಮೇಲೆ ಚಡ್ಡಿ ಹೊತ್ತಾಗಲೇ ಅದು ಜಗಜ್ಜಾಗಿರವಾಗಿದೆ ಇಂಥ ಅನಾಗರಿಕ ಛಲವಾದಿ ನಾರಾಯಣಸ್ವಾಮಿ ಅವರು ಜಿಲ್ಲೆಗೆ ಭೇಟಿ ನೀಡಿದಾಗಲೆಲ್ಲ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಸುಖ ಸುಮ್ಮನೆ ಆರೋಪ ಮಾಡುವುದು ಅವರನ್ನು ನಿಂದಿಸುವುದು ನಿರಂತರವಾಗಿ ಮಾಡುತ್ತಿದ್ದು, ಹೀಗೆ ನಿಂದನೆ ಮಾಡುವುದು ಮುಂದುವರಿಸಿದರೆ ಇಲ್ಲಿನ ಜನ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದ್ದರು.

ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ಪ್ರಕಾಶ್ ಮೂಲ ಭಾರತಿ, ರಾಜಕುಮಾರ್ ಕಪನೂರ, ಮಲ್ಲಪ್ಪ ಹೊಸಮನಿ, ಸುರೇಶ್ ಹಾದಿಮನಿ, ಗುಂಡಪ್ಪ ಲಂಡನ್ಕರ್, ಪ್ರಕಾಶ್ ನಾಗನಹಳ್ಳಿ, ದಿನೇಶ್ ದೊಡ್ಡಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Samarth biral


 rajesh pande