ಕುಂದಗೋಳ, 26 ಮೇ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲೆಯ ಕುಂದಗೋಳ ವಿಧಾನಸಭಾ ಕ್ಷೇತ್ರದ ಛಬ್ಬಿ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಮುಂಗಾರು ಹಂಗಾಮಿನ ಬೀಜಗಳನ್ನು ಶಾಸಕ ಎಂ. ಆರ್. ಪಾಟೀಲ ವಿತರಿಸಿದರು.
ಇದೇ ವೇಳೆ ಶಾಸಕರು ಅಧಿಕಾರಿಗಳಿಗೆ ಉತ್ತಮ ಗುಣಮಟ್ಟದ ಬೀಜಗಳನ್ನು ಸಕಾಲದಲ್ಲಿ ವಿತರಿಸಲು ಸೂಚಿಸಿದರು. ರೈತರಿಗೆ ಅಧಿಕಾರಿಗಳೊಂದಿಗೆ ಸಹಕರಿಸಿ ಬೀಜ ಪಡೆದುಕೊಳ್ಳಲು ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕಿ ಮಂಜುಳಾ ತೆಂಬದ, ಕೃಷಿ ಅಧಿಕಾರಿ ಮಂಜುಳಾ ಸುರಗೊಂಡ, ನಿಂಗನಗೌಡ ಮರಿಗೌಡರ ಅಗಡಿ, ಛಬ್ಬಿ ಗ್ರಾಮ ಪಂಚಾಯಿತಿಯ ಸದಸ್ಯರು, ರೈತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa