ಮಂಗಳೂರು, 26 ಮೇ (ಹಿ.ಸ.) :
ಆ್ಯಂಕರ್ : ಮೂರು ದಿನಗಳ ಹಿಂದೆ ಆರಂಭವಾದ ಮುಂಗಾರು ಮಳೆ ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದುವರೆದಿದೆ. ಮಂಗಳೂರು ಸೇರಿದಂತೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.
ಮಳೆಯಿಂದ ನಗರದ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಒಳಚರಂಡಿ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸದೇ ರಸ್ತೆಗಳಲ್ಲೇ ನೀರು ಸಂಗ್ರಹವಾಗಿದೆ. ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಿಂದ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವೂ ಸಂಭವಿಸಿದೆ.
ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮುಂದಿನ ಎರಡು ದಿನಗಳ ಕಾಲ ಮಂಗಳೂರು ಸೇರಿದಂತೆ ಕರ್ನಾಟಕದ ಕರಾವಳಿಯಲ್ಲಿ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa