ಕುಕ್ಕೆ ಸುಬ್ರಹ್ಮಣ್ಯ, 26 ಮೇ (ಹಿ.ಸ.) :
ಆ್ಯಂಕರ್ : ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಮಳೆಯ ಪರಿಣಾಮ, ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಇದರಿಂದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು, ಭಕ್ತರಿಗೆ ನದಿಗೆ ಇಳಿಯಲು ನಿಷೇಧಿಸಲಾಗಿದೆ.
ಭಕ್ತರಿಗೆ ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ. ಸ್ನಾನಘಟ್ಟದ ಸುತ್ತ ಹೆಚ್ಚುವರಿ ಸಿಬ್ಬಂದಿಯನ್ನು ದೇವಸ್ಥಾನ ಆಡಳಿತ ಮಂಡಳಿ ನಿಯೋಜಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa