ಬೆಂಗಳೂರು, 26 ಮೇ (ಹಿ.ಸ.) :
ಆ್ಯಂಕರ್ : ಸಚಿವ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮೈಸೂರು ಪೈಂಟ್ಸ್ ಮತ್ತು ವಾರ್ನಿಶ್ ಲಿಮಿಟೆಡ್ ನ ಆಡಳಿತ ಮಂಡಳಿಯ ಸಭೆ ನಡೆಯಿತು.
ಸಂಸ್ಥೆಯ ಕಾರ್ಯನಿರ್ವಹಣೆಯ ಪ್ರಗತಿ, ಭವಿಷ್ಯದ ಯೋಜನೆಗಳು ಹಾಗೂ ಸಂಸ್ಥೆಯ ವಿಕಾಸದ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಸಲಾಯಿತು.
ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ಉತ್ಪಾದನೆ ಮತ್ತು ಆರ್ಥಿಕ ಸ್ಥಿರತೆಯನ್ನು ಹೆಚ್ಚಿಸಲು ಅಗತ್ಯ ಕಾರ್ಯಯೋಜನೆ ರೂಪಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa