ಹೊಸಪೇಟೆ , 26 ಮೇ (ಹಿ.ಸ.) :
ಆ್ಯಂಕರ್ : ಡೆಂಗ್ಯೂಗೆ ಯಾವುದೇ ಲಸಿಕೆ ಅಥವಾ ಆಂಟಿ-ವೈರಲ್ ಚಿಕಿತ್ಸಾ ಕ್ರಮಗಳಿಲ್ಲ ಅದನ್ನು ತಡೆಗಟ್ಟುವಲ್ಲಿ ನಮಗಿರುವ ಅತ್ಯುತ್ತಮ ಆಯ್ಕೆಯಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ ಅವರು ಹೇಳಿದ್ದಾರೆ.
ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಸೋಮವಾರ, ಒಂದು ರೋಗ, ಸೋಂಕು, ಕಾಯಿಲೆ ತಡೆಗಟ್ಟುವಿಕೆ ಕೆಲಸ ಕೇವಲ ಸರ್ಕಾರಿ ಇಲಾಖೆಗಳ ಪ್ರಯತ್ನದಿಂದ ಅಸಾಧ್ಯ. ಸಾರ್ವಜನಿಕರ ಸಹಕಾರ ಹಾಗೂ ಮುಂಜಾಗ್ರತ ಕ್ರಮಗಳ ಪಾಲನೆಯಿಂದ ಮಾತ್ರ ಸಾಧ್ಯವಾಗಲಿದೆ ಎಂದು ಹೇಳಿದರು.
ಡೆಂಗ್ಯೂ ಸೋಂಕು, ಈಡಿಸ್ ಸೊಳ್ಳೆಗಳು ಹಗಲು ಕಚ್ಚುವಿಕೆಯಿಂದ ಉಂಟಾಗುವ ವೈರಸ್ ರೋಗಗಳು, ನೀರಿನಲ್ಲಿ ರೋಗಗಳು ಮಾಡುತ್ತವೆ ಮತ್ತು ಅದರ ಜೀವನ ಚಕ್ರವನ್ನು ಪೂರ್ಣಗೊಳಿಸಲು 7-12 ದಿನಗಳನ್ನು ತೆಗೆದುಕೊಳ್ಳುತ್ತದೆ. ಡೆಂಗ್ಯೂ ಸೋಂಕಿಗೆ ಒಳಗಾಗಿದ್ದರೆ ಅದು ಮಾರಕ ಎಂದು ತಿಳಿದುಬಂದಿದೆ. ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಶಂಕರನಾಯ್ಕ ಮಾತನಾಡಿ, ಹಿಂದಿನ 314 ಡೆಂಗಿ ಜ್ವರದ ಪ್ರಕರಣಗಳು ಕಂಡುಬಂದಿದ್ದು, ಯಾವುದೇ ಪ್ರಾಣಹಾನಿ ಆಗಿಲ್ಲ. ಈ ವರ್ಷ ಆರಂಭದಲ್ಲಿ 14 ಪ್ರಕರಣಗಳು ಸೇರಿವೆ. ಆಸ್ಪತ್ರೆಗೆ ದಾಖಲಾಗಿಲ್ಲ. ಡೆಂಗಿ ಜ್ವರ ಸೋಂಕಿತರು ಸುರಕ್ಷಿತವಾಗಿದ್ದಾರೆ. ಇನ್ನಷ್ಟು ಜನಜಾಗೃತಿ ಮೂಡಿಸುವ ಆಧುನಿಕ ಡೆಂಗಿ ದಿನಾಚರಣೆಗೆ ಮಾನವ ಸರಪಳಿ ನಿರ್ಮಿಸಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಯಾವದೇ ಜ್ವರಗಳು ಕಂಡು ಬಂದರೆ ಸಮೀಪದ ಆಸ್ಪತ್ರೆಗೆ ತೆರಳಿ ಚಿಕಿತ್ಸೆಗೆ ಮುಂದಾಗದೆ ನಿರ್ಲಕ್ಷ್ಯ ಬೇಡ. ಎಲ್ಲಾ ಜ್ವರಗಳು ಡೆಂಗ್ಯೂ ಆಗಿಲ್ಲ. ಪತ್ತೆಯಾದರೇ ಚಿಕಿತ್ಸೆ ಪಡೆಯಲು ಸುಲಭವಾಗಿದೆ.
ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಜಂಬಯ್ಯ ಅವರು ಮಾತನಾಡಿ, ಪ್ರತಿಯೊಬ್ಬರು ಮನೆಗಳ ಸುತ್ತಮುತ್ತಲಿನ ವಾತವಾರಣವನ್ನು ನೈರ್ಮಲ್ಯದಿಂದ ಕಾಪಾಡುತ್ತಿದೆ. ಮನೆಯಲ್ಲಿ ಮಲಗುವಾಗ ಸೊಳ್ಳೆ ಪರದೆಗಳನ್ನು ಬಳಸಿ. ಮನೆಯಲ್ಲಿನ ಆರೋಗ್ಯ, ಹಿರಿಯ ನಾಗರೀಕರದ ಬಗ್ಗೆ ಕಾಳಜಿ ವಹಿಸಬೇಕಾಗಿದೆ.
ಇದೇ ವೇಳೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಡೆಂಗ್ಯೂ ಕುರಿತು ಜಾಗೃತಿ ಮೂಡಿಸಲಾಯಿತು. ಡೆಂಗ್ಯೂ ನಿಯಂತ್ರಣ ಕ್ರಮಗಳ ಕುರಿತು ಪೋಸ್ಟರ್ಗಳನ್ನು ಬಿಡುಗಡೆ ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತರಾದ ಚಂದ್ರಪ್ಪ, ಜಿಲ್ಲಾ ಕ್ಷಯರೋಗ ನಿರ್ಮೂಲನ ಅಧಿಕಾರಿ ಡಾ.ಭಾಸ್ಕರ್, ತಾಲೂಕು ಆರೋಗ್ಯ ಅಧಿಕಾರಿ ಡಾ.ವಿನೋದ ಕುಮಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಷಣ್ಮುಖ, ಜಿಲ್ಲಾ ಕುಷ್ಠರೋಗದ ನಿಯಂತ್ರಣಾಧಿಕಾರಿ ಡಾ.ರಾಧಿಕಾ, ಕೀಟ ತಡೆ ನಂದಾ ಖಡಿ, ಜಿಲ್ಲಾ ಆರೋಗ್ಯ ಎಂ.ಪಿ.ದೊಡ್ಡಮನಿ, ಶ್ರೀಸಪ್ತಗಿರಿ ಸ್ಕೂಲ್ ಆಫ್ ನರ್ಸಿಂಗ್ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್