ತುಮಕೂರು : ಬುಗುಡನಹಳ್ಳಿ ಕೆರೆಗೆ ಪರಮೇಶ್ವರ ಭೇಟಿ
ತುಮಕೂರು, 26 ಮೇ (ಹಿ.ಸ.) : ಆ್ಯಂಕರ್ : ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಸುವ 'ಬುಗುಡನಹಳ್ಳಿ ಕೆರೆ'ಗೆ ಹೇಮಾವತಿ ಜಲಾಶಯದಿಂದ ನೀರನ್ನು ಹರಿಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು. ಹೇಮಾವತಿ ಜಲಾಶಯದಿ
Visit


ತುಮಕೂರು, 26 ಮೇ (ಹಿ.ಸ.) :

ಆ್ಯಂಕರ್ : ತುಮಕೂರು ನಗರಕ್ಕೆ ಕುಡಿಯುವ ನೀರು ಪೂರೈಸುವ 'ಬುಗುಡನಹಳ್ಳಿ ಕೆರೆ'ಗೆ ಹೇಮಾವತಿ ಜಲಾಶಯದಿಂದ ನೀರನ್ನು ಹರಿಸಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು.

ಹೇಮಾವತಿ ಜಲಾಶಯದಿಂದ 2 ಟಿಎಂಸಿ ನೀರು ಹರಿಸಲಾಗುತ್ತಿದ್ದು, ಪ್ರತಿ ದಿನ 1200 ಕ್ಯುಸೆಕ್ ನೀರು ಬರುತ್ತಿದೆ. ಮುಂದಿನ ಎಂಟು ದಿನಗಳಲ್ಲಿ ಸಂಪೂರ್ಣವಾಗಿ ಕೆರೆ ಭರ್ತಿಯಾಗಲಿದೆ. ಈ ನೀರು ಕನಿಷ್ಟ 6ರಿಂದ 8 ತಿಂಗಳವರೆಗೆ ತುಮಕೂರು ನಗರಕ್ಕೆ ಲಭ್ಯವಿರಲಿದೆ. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಡಳಿತಕ್ಕೆ ಪರಮೇಶ್ವರ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande