ಎಲ್ ಆ್ಯಂಡ್ ಟಿ ಕಂಪನಿ ಪ್ರತಿನಿಧಿಗಳ ಜೊತೆ ಪ್ರಿಯಾಂಕ ಖರ್ಗೆ ಸಭೆ
ಬೆಂಗಳೂರು, 26 ಮೇ (ಹಿ.ಸ.) : ಆ್ಯಂಕರ್ : ಕಲಬುರಗಿಗೆ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಯ ಅನುಷ್ಠಾನದಲ್ಲಿನ ನಿರಂತರ ವಿಳಂಬವನ್ನು ಪರಿಹರಿಸಲು ಎಲ್ ಆ್ಯಂಡ್ ಟಿ ಕಂಪನಿ ಪ್ರತಿನಿಧಿಗಳ ಜೊತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಬೆಂಗಳೂರಿನಲ್ಲಿ ವಿವರವಾದ ಪರಿಶೀಲನಾ ಸಭೆ ನಡೆಸಿದರ
Meeting


ಬೆಂಗಳೂರು, 26 ಮೇ (ಹಿ.ಸ.) :

ಆ್ಯಂಕರ್ : ಕಲಬುರಗಿಗೆ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಯ ಅನುಷ್ಠಾನದಲ್ಲಿನ ನಿರಂತರ ವಿಳಂಬವನ್ನು ಪರಿಹರಿಸಲು ಎಲ್ ಆ್ಯಂಡ್ ಟಿ ಕಂಪನಿ ಪ್ರತಿನಿಧಿಗಳ ಜೊತೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಬೆಂಗಳೂರಿನಲ್ಲಿ ವಿವರವಾದ ಪರಿಶೀಲನಾ ಸಭೆ ನಡೆಸಿದರು.

ಈ ಯೋಜನೆಯು ನಗರದ ನಿವಾಸಿಗಳಿಗೆ ಬಹಳ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ಕೆಲಸದ ವೇಗವು ತೃಪ್ತಿಕರವಾಗಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದರು.

ಪ್ರಗತಿ ಪರಿಶೀಲನೆ ಮತ್ತು ಅವರ ತಂಡದ ವಿವರಣೆಯನ್ನು ಆಲಿಸಿದ ನಂತರ, ಸಚಿವರು ಅವರ ಕಾಲಮಿತಿಯನ್ನು ಪರಿಷ್ಕರಿಸಿ. ಹೆಚ್ಚಿನ ನೆಪಗಳು ಅಥವಾ ಕಳಪೆ ಕಾಮಗಾರಿಗೆ ಯಾವುದೇ ಅವಕಾಶವಿಲ್ಲ ಎಂದು ಸ್ಪಷ್ಟ ನಿರ್ದೇಶನವನ್ನು ನೀಡಿದರು.

ಎಲ್ ಆ್ಯಂಡ್ ಟಿ ಸಂಸ್ಥೆ ಪರಿಷ್ಕೃತ ಗಡುವನ್ನು ಪಾಲಿಸಲು ಮತ್ತು ನಿರೀಕ್ಷೆಗಳನ್ನು ಪೂರೈಸಲು ವಿಫಲವಾದರೆ, ಈ ಒಪ್ಪಂದವನ್ನು ಕೊನೆಗೊಳಿಸುವ ಮತ್ತು ಪರ್ಯಾಯ ಸಂಸ್ಥೆಗಳನ್ನು ತೊಡಗಿಸಿಕೊಳ್ಳುವ ಆಯ್ಕೆಯನ್ನು ಅನುಸರಿಸುವುದು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುವುದು ನಮಗೆ ಅನಿವಾರ್ಯವಾಗಲಿದೆ ಸಚಿವರು ಎಚ್ಚರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande