ಕಾರವಾರ, 26 ಮೇ (ಹಿ.ಸ.) :
ಆ್ಯಂಕರ್ : ಕಾರವಾರ ಜಿಲ್ಲೆಯಲ್ಲಿ ಮಳೆ ಅವಾಂತರ ಮುಂದುವರೆದಿದ್ದು, ಭಾನುವಾರ ರಾತ್ರಿ ಕುಮಟಾದ ಮುಸುಗುಪ್ಪ ಬಳಿ ಬೃಹತ್ ಬಂಡೆಗಳ ಸಹಿತ ಗುಡ್ಡ ಕುಸಿತವಾಗಿ ಮೂರೂರು-ಹರಕಡೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ದೇವಿಮನೆ ಘಟ್ಟ ಸೇರಿದಂತೆ ಹಲವೆಡೆ ಗುಡ್ಡ ಕುಸಿತಗೊಂಡು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಕುಮಟಾ ತಾಲೂಕಿನ ಮೂರೂರು-ಮುಸುಗುಪ್ಪ ರಸ್ತೆಯಲ್ಲಿ ಬಿದ್ದಂತಹ ಕಲ್ಲು ಬಂಡೆಯನ್ನು ತೆರವುಗೊಳಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಂಡಿದ್ದು ಸಾರ್ವಜನಿಕರು ಪರ್ಯಾಯವಾಗಿ ಮೂರೂರು-ಕುಮಟಾ ಹೆದ್ದಾರಿ ಬಳಸುವಂತೆ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa