ಹೊಸಪೇಟೆ, 26 ಮೇ (ಹಿ.ಸ.) :
ಆ್ಯಂಕರ್ : ಮೇ.26 ರಿಂದ 31 ರವರೆಗೆ ಹಾಗೂ ಜೂ.23 ರಿಂದ 28 ರವರೆಗೆ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಲಸಿಕೆ ಅಭಿಯಾನವನ್ನು ಆಯೋಜಿಸಲಾಗಿದೆ. ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಜಂಬಯ್ಯ ತಿಳಿಸಿದ್ದಾರೆ.
ಸಂಸ್ಥೆ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಕಿತ್ಸೆಯಲ್ಲಿ ಕಲ್ಲಹಳ್ಳಿ ಆರೋಗ್ಯ ಕ್ಷೇಮ ಕೇಂದ್ರದಲ್ಲಿ ವಿಶೇಷ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಸೋಮವಾರದಂದು, ಎಲ್ಲಾ ಮಕ್ಕಳಿಗೆ ಲಸಿಕೆ ಹಾಕುವುದು ಕಡ್ಡಾಯವಾಗಿದೆ. ಅದರಲ್ಲೂ ಲಸಿಕೆ ವಂಚಿತ ಮಕ್ಕಳಿಗೆ ವಿಶೇಷ ಲಸಿಕಾ ಅಭಿಯಾನದ ಮೂಲಕ ಲಸಿಕೆಯನ್ನು ನೀಡಲಾಗುವುದು. ಐದು ವರ್ಷದ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಲು ಮುಂದಾಗಬೇಕು.
ಈ ವೇಳೆ ತಾಲೂಕು ಆರೋಗ್ಯ ಅಧಿಕಾರಿ ಡಾ.ವಿನೋದ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡಮನಿ, ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಧರ್ಮನಗೌಡ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಲತಾ, ಸಮುದಾಯ ಆರೋಗ್ಯ ಅಧಿಕಾರಿ ನಂದಿನಿ ಸೇರಿದಂತೆ ಆರೋಗ್ಯ ಸಿಬ್ಬಂದಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್