ಬಳ್ಳಾರಿ, 26 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲೆಯಲ್ಲಿ ಮೇ 26 ರಿಂದ 31 ರವರೆಗೆ ಒಂದು ವಾರ ವಿಶೇಷ ಲಸಿಕಾ ಅಭಿಯಾನ ನಡೆಯುತ್ತಿದೆ, ಮಗುವಿನ ವಯಸ್ಸಿಗನುಸಾರವಾಗಿ ತಪ್ಪದೇ ಲಸಿಕೆ ಹಾಕಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಕರೆ ನೀಡಿದ್ದಾರೆ.
ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಿಲ್ಲರ್ಪೇಟೆ ಇವರು ಸಂಯುಕ್ತಾಶ್ರಯದಲ್ಲಿ ನಗರದ ಶೇಷಾವಲಿ ದರ್ಗಾ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ಮೇ 31 ರ ವರೆಗೆ ನಡೆಯುವ ವಿಶೇಷ ಲಸಿಕಾ ಅಭಿಯಾನದಲ್ಲಿ ಭಾಗವಹಿಸಿ ಅವರು ಹೊಂದಿದ್ದಾರೆ.
ಮಗುವಿನ ಜನನದ ನಂತರ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಶಿಕ್ಷಣ ತಡೆಗಟ್ಟಲು ಬಿಸಿಜಿ, ಪೋಲಿಯೋ ರೋಗ ತಡೆಗಟ್ಟಲು ಪೋಲಿಯೋ ಹನಿ, ಕಾಮಾಲೆ ರೋಗ ತಡೆಗಟ್ಟಲು ಹೆಪಟೈಟೀಸ್ ಮತ್ತು ನವಜಾತ ಶಿಶುವಿನ ದೇಹದ ಒಳಗಡೆ ಆಂತರಿಕ ರಕ್ತಸ್ರಾವ ಸಾಧ್ಯತೆ ತಡೆಗಟ್ಟಲು ವಿಟಮಿನ್-ಕೆ ಚುಚ್ಚುಮದ್ದನ್ನು ಮೊದಲ ದಿನವೇ ನೀಡಲಾಗುತ್ತಿದೆ. ನಂತರ ಅನುಸಾರವಾಗಿ ಮಾರಕ ರೋಗಗಳನ್ನು ತಡೆಗಟ್ಟಲು ಒಂದು ವರ್ಷದೊಳಗಿನ ಎಲ್ಲಾ ಲಸಿಕೆಗಳನ್ನು ಉಚಿತವಾಗಿ ಹಾಕಲಾಗುತ್ತದೆ. ಪಾಲಕರು ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಗುವಿಗೆ ಹಾಕಬೇಕಾದ ಲಸಿಕೆಗಳನ್ನು ತಪ್ಪದೇ ಹಾಕಬೇಕು.
ಪ್ರತಿ ಗುರುವಾರ ಎಲ್ಲಾ ಗ್ರಾಮ, ವಾರ್ಡ್ಗಳಲ್ಲಿ ಲಸಿಕೆ ಹಾಕಲಾಗುತ್ತಿದೆ, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ದಿನ ಲಸಿಕೆ ಹಾಕಲಾಗುತ್ತಿದೆ. ಮಗು ಲಸಿಕೆ ವಂಚಿತರಾಗಬಾರದೆಂಬ ಹಿನ್ನಲೆಯಲ್ಲಿ ಸರ್ಕಾರವು ಏಪ್ರಿಲ್, ಮೇ, ಜೂನ್ ಮೂರು ತಿಂಗಳ ಕಾಲ ನಿಗಧಿತ ಅವಧಿಯಲ್ಲಿ ಲಸಿಕೆ ಪಡೆಯಿತು. ಲಸಿಕೆಯನ್ನು ಪಡೆಯದೇ ಇರುವ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕುವ ಕಾರ್ಯವನ್ನು ಮೇ 26 ರಿಂದ 31 ರ ವರೆಗೆ ಮಾಡಲಾಗಿದೆ.
ಇತ್ತೀಚೆಗೆ ಕೆಲವು ಪ್ರದೇಶಗಳಲ್ಲಿ ಕಂಡುಬರುತ್ತಿರುವ ದಡಾರ ಪ್ರಕರಣಗಳ ನಿಯಂತ್ರಣಕ್ಕಾಗಿ ಮಗುವಿನ ವಯಸ್ಸು 9 ತಿಂಗಳು ತುಂಬಿದ ನಂತರ ಹಾಗೂ ಒಂದು ವರ್ಷ ವಯಸ್ಸಿನಲ್ಲಿ ಎರಡು ಬಾರಿ ಲಸಿಕೆ ಹಾಕುವ ಮೂಲಕ ದಡಾರ ತಡೆಗಟ್ಟಬಹುದು ಎಂದು ಹೇಳಿದರು.
ಮಗುವಿನ ಒಂದುವರೆ ತಿಂಗಳು, ಎರಡು ತಿಂಗಳು ಹಾಗೂ ಮೂರು ತಿಂಗಳ ವಯಸ್ಸಿನ ಕ್ರಮವಾಗಿ ಗಂಟಲು ಮಾರಿ, ನಾಯಿಕೆಮ್ಮು, ಧನುರ್ವಾಯು ರೋಟ ವೈರಸ್, ಹೆಚ್ ಇನ್ಫ್ಲೂಯೆಂಜಾ, ಕಾಮಾಲೆಗಾಗಿ ಪೆಂಟಾವೈಲೆಂಟ್ ಲಸಿಕೆ, ರೋಟವೈರಸ್ ಅತಿಸಾರಬೇಡಿ ಗೆ ನಿಮೋಕಾಕಲ್ ಲಸಿಕೆ ಹಾಕದಿದ್ದರೆ. ಅದೇರೀತಿಯಾಗಿ ಮಗುವಿನ ಒಂಬತ್ತು ತಿಂಗಳ ವಯಸ್ಸು ತುಂಬಿದ ನಂತರ ಮೆದುಳು ಜ್ವರ ರೋಗಕ್ಕೆ ಜಾಪನೀಸ್ ಎನ್ಸ್ಪಲಿಟಿಸ್ ಲಸಿಕೆ, ದಡಾರ ರೂಬೆಲ್ಲಾ ರೋಗಕ್ಕೆ ಮಿಸ್ ರೂಬೆಲ್ಲಾ ಲಸಿಕೆ, ಹಾಗೂ ಸಂಜೆಯ ಹೊತ್ತು ಎಲ್ಲರಿಗೂ ಇರುಳುಗಣ್ಣು ರೋಗಕ್ಕೆ ವಿಟಮಿನ್-ಎ ಅನ್ನಾಂಗ ದ್ರಾವಣ ನೀಡಲಾಗುತ್ತಿದೆ, ತಪ್ಪದೇ ಹಾಕಬೇಕು ಎಂದು ಅವರು ಹೇಳಿದರು.
ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಡಾ.ಹನುಮಂತಪ್ಪ ಅವರು ಮಾತನಾಡಿ, ಲಸಿಕೆ ನೀಡುವಲ್ಲಿ ಸಾರ್ವಜನಿಕರ ಅಭಿಪ್ರಾಯ ಮತ್ತು ಅನಿಸಿಕೆಗಳನ್ನು ಕ್ರೂಢೀಕರಿಸಿದ ತಪ್ಪು ನಂಬಿಕೆಗಳ ಕುರಿತು ಜಾಗೃತಿ ನೀಡಲಾಗುತ್ತಿದೆ, ಗಾಳಿಸುದ್ದಿ ನಂಬಿ ಲಸಿಕೆ ಬೇಡವೆನ್ನುವವರಿಗೆ ವ್ಯಾಪಕವಾಗಿ ಮನೆ ಭೇಟಿ ಮೂಲಕ ಸಭೆ, ಸಮುದಾಯದ ಮುಖಂಡರ ಮೂಲಕ ಮಾಹಿತಿ ಒದಗಿಸಿ ಅವರಲ್ಲಿನ ತಪ್ಪು ನಂಬಿಕೆಗಳನ್ನು ಹೋಗಲಾಡಿಸಿ ಎಲ್ಲಾ ಲಸಿಕೆಗಳನ್ನು ಹಾಕಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಬಳ್ಳಾರಿ ವಲಯದ ಪ್ರತಿನಿಧಿ ಆರ್.ಎಸ್.ಶ್ರೀಧರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಕ್ಷೇತ್ರ ಲಸಿಕಾ ಮೇಲ್ವಿಚಾರಕ ಕೋಟೇಶ್ವರ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಾಜೇಶ್ವರಿ, ಆಶಾಕಾರ್ಯಕರ್ತೆ ತಾಯಮ್ಮ, ಅಂಗನವಾಡಿ ಕಾರ್ಯಕರ್ತೆ ಪುಷ್ಪ ಸೇರಿದಂತೆ ತಾಯಂದಿರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್