ರಾಯಚೂರು, 26 ಮೇ (ಹಿ.ಸ.) :
ಆ್ಯಂಕರ್ : ಕಲ್ಯಾಣ ಕರ್ನಾಟಕ ಭಾಗದ ರೈತರ ಅವಶ್ಯಕತೆಗೆ ಅನುಗುಣವಾಗಿ ಉತ್ತಮ ಗುಣಮಟ್ಟದ ಬೀಜಗಳು ಮತ್ತು ರಸಗೊಬ್ಬರಗಳ ಪೂರೈಕೆ ಮಾಡಬೇಕು ಎಂದು ಕೃಷಿ ಇಲಾಖೆ ಆಯುಕ್ತರಾದ ವೈ.ಎಸ್.ಪಾಟೀಲ್ ಅವರು ಸೂಚಿಸಿದರು.
ಮೇ.26ರಂದು ಸೋಮವಾರ ನಗರದ ಕೃಷಿ ವಿವಿಯ ಆಡಳಿತ ಭವನದಲ್ಲಿ ಆಯೋಜಿಸಿದ್ದ ಕಲಬುರಗಿ ವಿಭಾಗದ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿದ್ದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಂಗಾರು ಮಳೆ ಉತ್ತಮವಾಗಿದೆ, ಮುಂದಿನ ದಿನಗಳಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ರೈತರಿಗೆ ಉತ್ತಮ ಗುಣಮಟ್ಟದ ಬೀಜಗಳು ಹಾಗೂ ರಸಗೊಬ್ಬರಗಳ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು.
ಬೀಜ, ರಸಗೊಬ್ಬರಗಳ ಕೃತಕ ಅಭಾವ ಸೃಷ್ಟಿಸಿದರೆ ಅಥವಾ ಸರ್ಕಾರ ನಿಗದಿ ಪಡಿಸಿದ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ, ಅಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಗೊಬ್ಬರ ಮಾರಾಟ ಕೇಂದ್ರಗಳಲ್ಲಿ ಗೊಬ್ಬರದ ದರಗಳನ್ನು ಫಲಕದಲ್ಲಿ ಪ್ರದರ್ಶಿಸಬೇಕು.
ಹೋಬಳಿ ಮಟ್ಟದ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರಿಗೆ ಬಿತ್ತನೆ ಬೀಜಗಳು, ಗೊಬ್ಬರದ ಪರಿಕರಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗಿದೆ ವಿತರಣೆಗೆ ಸಂಬಂಧಿಸಿದ ಸೂಚನೆ.
ಬೀಜ ರಸಗೊಬ್ಬರ ಹಾಗೂ ಪೂರಕಗಳ ದಾಸ್ತಾನುಗಳ ಬಗ್ಗೆ ರೈತರಿಗೆ ತಿಳಿಸಬೇಕು. ಈ ಬಗ್ಗೆ ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಮಾಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಕಡೆ ನಿರಂತರ ಭೇಟಿ ನೀಡಿ ಪರಿಶೀಲನೆ ಮಾಡಬೇಕೆಂದರು.
ಇದೇ ಸಂದರ್ಭದಲ್ಲಿ ಬೆಂಗಳೂರಿನ ಜಲನಯನ ಆಯುಕ್ತರಾದ ಮಹೇಶ್ ಬಿ.ಶಿರೂರ್, ಕೃಷಿ ನಿರ್ದೇಶಕರಾದ ಜಿ.ಟಿ.ಪುತ್ರ, ರಾಜ್ಯ ಸಕೇಂದ್ರಿ ಕೃಷಿ ನಿರ್ದೇಶಕರಾದ ವೆಂಕಟರಾಮರೆಡ್ಡಿ ಜೆ. ಪಾಟೀಲ್, ಕರ್ನಾಟಕ ರಾಜ್ಯ ನಿಯಮಿತದ ವ್ಯವಸ್ಥಾಪನ ನಿರ್ದೇಶಕರಾದ ಅನೂಪ್ ಕೆ.ಜಿ, ಅಪರ ಕೃಷಿ ನಿರ್ದೇಶಕರಾದ ಆಂಥೋನಿ, ಕರ್ನಾಟಕ ಬೀಜ ಮತ್ತು ಸಾವಯವ ಅಪರ ಕೃಷಿ ನಿರ್ದೇಶಕರಾದ ಸದಾಶಿವ, ರಾಯಚೂರು ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಜಯಪ್ರಕಾಶ್ ಟಿ.ಸಿ., ರಾಯಚೂರು ಜಿಲ್ಲೆಯ ವಿವಿಧ ಕೃಷಿ ಕೃಷಿ ಅಧಿಕಾರಿಗಳಾದ ದೀಪಾ, ಶ್ರೀನಿವಾಸ್, ಗುರುನಾಥ, ನಜೀರ್ ಅಹಮ್ಮದ್, ಮಲ್ಲಿಕಾರ್ಜುನ ಸೇರಿದಂತೆ ವಿವಿಧ ಜಿಲ್ಲಾ ಜಂಟಿ ನಿರ್ದೇಶಕರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್