ಪಲಮು, 27 ಮೇ (ಹಿ.ಸ.) :
ಆ್ಯಂಕರ್ : ಜಾರ್ಖಂಡ್ನಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಂದುವರೆದಿದೆ. ಸೋಮವಾರ ತಡ ರಾತ್ರಿ ಪಲಮು ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಕಮಾಂಡರ್ನನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕಾರ್ಯಾಚರಣೆ ವೇಳೆ 15 ಲಕ್ಷ ಬಹುಮಾನ ಘೋಷಿತ ಮತ್ತೊಬ್ಬ ಮಾವೋವಾದಿ ಗಾಯಗೊಂಡಿರುವುದಾಗಿ ನಕ್ಸಲ್ ನಿಗ್ರಹ ಪಡೆ ಮಾಹಿತಿ ನೀಡಿದೆ. ಕಾರ್ಯಾಚರಣೆ ಬಳಿಕ ಮಾವೋಗಳಿಂದ ಸೆಲ್ಫ್ ಲೋಡಿಂಗ್ ರೈಫಲ್ ಸೇರಿದಂತೆ ಹಲವಾರು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಮೊಹಮ್ಮದ್ಗಂಜ್ ಮತ್ತು ಹೈದರ್ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೀತಾಚುವಾನ್ ಪ್ರದೇಶದ ಬಳಿ ಸೋಮವಾರ ತಡರಾತ್ರಿ ಭದ್ರತಾ ಪಡೆ ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa