ಬೆಳೆ ವಿಮೆ ಹಣ ನೀಡುವಂತೆ ಬಾಲರಾಜ್ ಗುತ್ತೆದಾರ್ ಒತ್ತಾಯ
Balraj Guttedar demands payment of crop insurance money
Balraj Guttedar demands payment of crop insurance money


ಕಲಬುರಗಿ, 27 ಮೇ (ಹಿ.ಸ.) :

ಆ್ಯಂಕರ್ : ಕಳೆದ ಮಾರ್ಚ್ ತಿಂಗಳಲ್ಲಿ ರೈತರಿಗೆ ಸಿಗಬೇಕಾದ ಬೆಳೆ ವಿಮೆ ಹಣ ಮಂಜೂರಾತಿಗಾಗಿ ಪ್ರತಿಭಟನೆ ನಡೆಸಲಾಗಿತ್ತು. ಅದರಂತೆ ಸರ್ಕಾರ‌ 667.73 ಕೋಟಿ ರೂ ಬೆಳೆ ವಿಮೆ ಹಣ ಬಿಡುಗಡೆ ಮಾಡಿತ್ತು. ಆದರೆ ಸರ್ಕಾರ ಬಿಡುಗಡೆ ಮಾಡಿದ ಹಣ ಇದುವರೆಗೆ ರೈತರ ಅಕೌಂಟ್‌ಗೆ ಜಮೆ ಆಗಿಲ್ಲವೆಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೆದಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮಳೆಗಾಲ ಆರಂಭವಾಗಿದ್ದರಿಂದ ರೈತರು ಸಾಲಸೂಲ ಮಾಡಿ ಬಿತ್ತನೆಗೆ ಅಣಿಯಾಗ್ತಿದ್ದು, ಇದರ ಮಧ್ಯೆ ರೈತರು ಬೆಳೆ ವಿಮೆ ಹಣ ಸಿಗದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ಕೂಡಲೆ ಸರ್ಕಾರ ಘೋಷಣೆ ಮಾಡಿದಂತೆ ಬೆಳೆ ವಿಮೆ ಹಣವನ್ನು ರೈತರ ಖಾತೆಗೆ ಜಮಾ ಮಾಡಬೇಕು ಎಂದು ಆಗ್ರಹಿಸಿದರು ಸರ್ಕಾರ ಕೂಡಲೆ ಬೆಳೆ ವಿಮೆ ಹಣ ಬಿಡುಗತ ಮಾಡದೇ ಇದ್ದರೇ ಉಗ್ರ ಹೋರಾಟ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಸಿದರು.

ಸುದ್ದಿಗೋಷ್ಟಿಯಲ್ಲಿ ಜೆಡಿಎಸ್ ಪಕ್ಷದ ಮುಖಂಡರಾದ ಶ್ಯಾಮರಾವ್ ಸೂರನ್, ಬಸವರಾಜ್ ಬಿರಬಿಟ್ಟೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Samarth biral


 rajesh pande