ಕೇಂದ್ರದ ಯೋಜನೆಗಳಿಗೆ ಕಾಂಗ್ರೆಸ್ ಸರಕಾರದಿಂದ ಕಲ್ಲು : ವಿಜಯೇಂದ್ರ
ಬೆಂಗಳೂರು, 27 ಮೇ (ಹಿ.ಸ.) : ಆ್ಯಂಕರ್ : ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಡವರ ಆರೋಗ್ಯದ ಅನುಕೂಲಕ್ಕಾಗಿ ಜನ ಔಷಧ ಕೇಂದ್ರಗಳನ್ನು ತೆರೆಯಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಜನ ಔಷಧಿ‌ ಕೇಂದ್ರಗಳನ್ನು ಬಂದ್ ಮಾಡುವ ಮೂಲಕ ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದ
Byv


ಬೆಂಗಳೂರು, 27 ಮೇ (ಹಿ.ಸ.) :

ಆ್ಯಂಕರ್ : ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಡವರ ಆರೋಗ್ಯದ ಅನುಕೂಲಕ್ಕಾಗಿ ಜನ ಔಷಧ ಕೇಂದ್ರಗಳನ್ನು ತೆರೆಯಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಜನ ಔಷಧಿ‌ ಕೇಂದ್ರಗಳನ್ನು ಬಂದ್ ಮಾಡುವ ಮೂಲಕ ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಕೇಂದ್ರದ ಜನಸ್ನೇಹಿ ಯೋಜನೆ ಸಹಿಸದ ರಾಜ್ಯ ಸರ್ಕಾರ ಕೇಂದ್ರದ ಯೋಜನೆಗಳಿಗೆ ಸಹಕಾರ ನೀಡುತ್ತಿಲ್ಲ. ಈ ಮೂಲಕ ಜನರಲ್ಲಿ ಕೇಂದ್ರದ ಬಗ್ಗೆ ತಪ್ಪು ಭಾವನೆ ಮೂಡಿಸಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ. ಇವರ ಹುಳುಕನ್ನು, ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರದ ಮೇಲೆ ಆರೋಪ ಮಾಡಲಾಗುತ್ತಿದೆ. ಕೇಂದ್ರದ ಯೋಜನೆಗಳಿಗೆ ಕಲ್ಲು ಹಾಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande