ಬೆಂಗಳೂರು, 27 ಮೇ (ಹಿ.ಸ.) :
ಆ್ಯಂಕರ್ : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನಮ್ಮ ರಾಜ್ಯದ ಹೆಮ್ಮೆಯಾಗಿದೆ. ಇದನ್ನು ಆಂಧ್ರ ಪ್ರದೇಶಕ್ಕೆ ಸ್ಥಳಾಂತರ ಮಾಡುವ ಪ್ರಸ್ತಾವನೆಯನ್ನು ನಾವು ಒಪ್ಪುವುದಿಲ್ಲ ಎಂದು ಸಚಿವ ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಈ ಸಂಸ್ಥೆಯನ್ನು ಬಿಜೆಪಿಯವರು ನೀಡಿದಲ್ಲ. ಆಂಧ್ರ ಪ್ರದೇಶದ ಚಂದ್ರಬಾಬು ನಾಯ್ಡು ಮಾಡಿರುವ ಮನವಿ ನಮಗೆ ಬೇಕಿಲ್ಲ. ಎಚ್ಎಎಲ್ ನಮ್ಮದು ಅದು ನಮ್ಮ ಹೆಮ್ಮೆ, ಅದನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಲು ಮುಂದಾದರೆ ಬಿಜೆಪಿ ಸಂಸದರೇ ಅದನ್ನು ತಡೆಯಬೇಕು. ಅದು ಬಿಟ್ಟು ಬಿಜೆಪಿ ಹೈಕಮಾಂಡ್ ಮುಂದೆ ಕೈ ಕಟ್ಟಿ ಕುಳಿತರೆ ನಮ್ಮ ರಾಜ್ಯಕ್ಕೆ ದ್ರೋಹ ಮಾಡಿದಂತಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa