ಇ-ಕಾಮರ್ಸ್‌ : ನಾಳೆ ಉನ್ನತ ಮಟ್ಟದ ಸಭೆ
ನವದೆಹಲಿ, 27 ಮೇ (ಹಿ.ಸ.) : ಆ್ಯಂಕರ್ : ಇ ಕಾಮರ್ಸ್‌ ವೇದಿಕೆಗಳಲ್ಲಿ ಗ್ರಾಹಕರ ಮೇಲೆ ನಕಾರಾತ್ಮಕ ಪರಿಣಾಮ ಬೀರುವಂತಹ ಪ್ರಮುಖ 13 ಕರಾಳ ಮಾದರಿ (ಡಾರ್ಕ್‌ ಪ್ಯಾಟರ್ನ್‌)ಗಳನ್ನು ಗುರುತಿಸಿದ್ದು, ಈ ಕುರಿತು ಪರಿಹಾರ ಕ್ರಮಕ್ಕಾಗಿ ಚರ್ಚಿಸಲು ದೆಹಲಿಯಲ್ಲಿ ಮೇ 28ರಂದು ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು
E commerce


ನವದೆಹಲಿ, 27 ಮೇ (ಹಿ.ಸ.) :

ಆ್ಯಂಕರ್ : ಇ ಕಾಮರ್ಸ್‌ ವೇದಿಕೆಗಳಲ್ಲಿ ಗ್ರಾಹಕರ ಮೇಲೆ ನಕಾರಾತ್ಮಕ ಪರಿಣಾಮ ಬೀರುವಂತಹ ಪ್ರಮುಖ 13 ಕರಾಳ ಮಾದರಿ (ಡಾರ್ಕ್‌ ಪ್ಯಾಟರ್ನ್‌)ಗಳನ್ನು ಗುರುತಿಸಿದ್ದು, ಈ ಕುರಿತು ಪರಿಹಾರ ಕ್ರಮಕ್ಕಾಗಿ ಚರ್ಚಿಸಲು ದೆಹಲಿಯಲ್ಲಿ ಮೇ 28ರಂದು ಉನ್ನತ ಮಟ್ಟದ ಸಭೆ ಕರೆಯಲಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಇ ಕಾಮರ್ಸ್‌ ವೇದಿಕೆಗಳಲ್ಲಿನ ವ್ಯಾಪಾರ-ವಹಿವಾಟುಗಳ ಬಗ್ಗೆ ರೀತಿಯ ದೂರುಗಳು ಬರುತ್ತಿವೆ. ಕೆವವೊಂದು ಕರಾಳ ಮಾದರಿ(ಡಾರ್ಕ್‌ ಪ್ಯಾಟರ್ನ್‌)ಗಳ ಬಗ್ಗೆ ಗ್ರಾಹಕರಲ್ಲಿ ತೀವ್ರ ಅಸಮಾಧಾನ ಮೂಡಿದೆ. ಹಾಗಾಗಿ ಗ್ರಾಹಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಅಂಶಗಳ ಕುರಿತು ಚರ್ಚಿಸಿ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಆಹಾರ, ಪ್ರಯಾಣ, ಸೌಂದರ್ಯ ವರ್ಧಕಗಳು, ಔಷಧಾಲಯ, ಚಿಲ್ಲರೆ ವ್ಯಾಪಾರ, ಬಟ್ಟೆ ಮತ್ತು ಎಲೆಕ್ಟ್ರಾನಿಕ್ಸ್ ವಲಯಗಳಲ್ಲಿನ ಪ್ರಮುಖ ಇ-ಕಾಮರ್ಸ್ ವೇದಿಕೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಮೆಜಾನ್, ಫ್ಲಿಪ್‌ಕಾರ್ಟ್, 1mg.com, ಆಪಲ್, ಬಿಗ್‌ಬಾಸ್ಕೆಟ್, ಮಿಶೋ, ಮೆಟಾ, ಮೇಕ್‌ ಮೈಟ್ರಿಪ್, ಪೇಟಿಎಂ, ಓಲಾ, ರಿಲಯನ್ಸ್ ರಿಟೇಲ್ ಲಿಮಿಟೆಡ್, ಸ್ವಿಗ್ಗಿ, ಜೊಮಾಟೊ, ಯಾತ್ರಾ, ಉಬರ್, ಟಾಟಾ, ಈಸ್‌ಮೈಟ್ರಿಪ್, ಕ್ಲಿಯರ್ ಟ್ರಿಪ್, ಇಂಡಿಯಾ ಮಾರ್ಟ್, ಇಂಡಿಗೊ ಏರ್‌ಲೈನ್ಸ್, ಕ್ಸಿಗೊ, ಜಸ್ಟೀಸ್‌ ಡಿಯಲ್, ಮೆಡಿಕಾ ಬಜಾರ್, ನೆಟ್‌ಮೆಡ್ಸ್, ಒಎನ್‌ಡಿಸಿ, ಥಾಮಸ್ ಕುಕ್ ಮತ್ತು ವಾಟ್ಸಾಪ್ ಗ್ರಾಹಕರ ಹಕ್ಕುಗಳ ರಕ್ಷಣೆ, ವ್ಯಾಪಾರದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹ ಮಾರುಕಟ್ಟೆ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗುತ್ತದೆ ಎಂದು ಸಚಿವ ಜೋಶಿ ಹೇಳಿದ್ದಾರೆ.

ಪ್ರಮುಖ ಕೈಗಾರಿಕಾ ಸಂಸ್ಥೆಗಳು, ಸ್ವಯಂ ಸೇವಾ ಗ್ರಾಹಕ ಸಂಸ್ಥೆಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಉನ್ನತ ಮಟ್ಟದ ಸಭೆಯಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದು, ಪಾರದರ್ಶಕ ವಹಿವಾಟು ಹಾಗೂ ಕರಾಳ ಮಾದರಿಗಳ ಬಗ್ಗೆ ಗ್ರಾಹಕರಲ್ಲಿರುವ ಕಳವಳ ನಿವಾರಣೆ, ಸಂಶೋಧನೆ, ನಿಯಂತ್ರಣ ಮತ್ತು ಪರಿಹಾರ ಕ್ರಮ ರೂಪಿಸುವ ನಿಟ್ಟಿನಲ್ಲಿ ಅಮೂಲ್ಯ ಸಲಹೆ, ಮಾರ್ಗದರ್ಶನ ನೀಡಲಿವೆ ಎಂದಿದ್ದಾರೆ.

ಇ ಕಾಮರ್ಸ್‌ ಸಂಸ್ಥೆಗಳಲ್ಲಿ ಗ್ರಾಹಕರ ದಾರಿ ತಪ್ಪಿಸುವ ಹಾಗೂ ಅನಪೇಕ್ಷಿತ ಆಯ್ಕೆಗಳನ್ನು ಮಾಡುವಂತೆ ಸೆಳೆಯುವ ʼಡಾರ್ಕ್ ಪ್ಯಾಟರ್ನ್‌ʼಗಳ ಅನ್ಯಾಯದ ವ್ಯಾಪಾರ ಪದ್ಧತಿಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಕೇಂದ್ರ ಗ್ರಾಹಕ ಇಲಾಖೆ ತ್ವರಿತ ಮತ್ತು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ. ಡಾರ್ಕ್ ಪ್ಯಾಟರ್ನ್‌ಗಳನ್ನು ಎದುರಿಸಲು ಇಲಾಖೆ ಅನೇಕ ಮಹತ್ವದ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande