ಕೊಪ್ಪಳ, 27 ಮೇ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಕುಕನೂರು ತಾಲೂಕಿನ ಕುಕನೂರು ಪಟ್ಟಣದ ಕೊಂಡದ ಕೆರೆ ಅಭಿವೃದ್ದಿಗಾಗಿ ರೂ.44.53 ಲಕ್ಷಗಳಲ್ಲಿ ಕಾಮಗಾರಿಯನ್ನು ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಕೆರೆ ಅಭಿವೃದ್ದಿಗೆ ಅಥವಾ ಇನ್ನಿತರೆ ಕಾಮಗಾರಿಗಳಿಗೆ ಕೆರೆ, ದಂಡೆ, ಸಾರ್ವಜನಿಕ ಆಸ್ತಿ ಪಾಸ್ತಿ ಕುರಿತಂತೆ ಸಾರ್ವಜನಿಕರ ತಕರಾರು ಇದ್ದಲ್ಲಿ ಅಥವಾ ಕೆರೆ ಅಭಿವೃದ್ದಿ ಪಡಿಸಲು ಯಾವುದೇ ಸಂಘ ಸಂಸ್ಥೆಗಳಿಂದ ಅಥವಾ ರೈತ ಬಾಂಧವರಿಂದ ಆಕ್ಷೇಪಣೆ ಇದ್ದಲ್ಲಿ ಈ ಸಾರ್ವಜನಿಕ ಪ್ರಕಟಣೆ ಹೊರಡಿಸಿದ 15 ದಿನದೊಳಗೆ ಪಟ್ಟಣ ಪಂಚಾಯತಿ ಕಾರ್ಯಾಲಯಕ್ಕೆ ಕಛೇರಿ ವೇಳೆಯಲ್ಲಿ ಬಂದು ಲಿಖಿತವಾಗಿ ಹೇಳಿಕೆಯನ್ನು ಸಲ್ಲಿಸಬೇಕು. ಇಲ್ಲವಾದಲ್ಲಿ ಯಾವುದೇ ಆಕ್ಷೇಪಣೆ ಇಲ್ಲವೆಂದು ಭಾವಿಸಿ ಕಾಮಗಾರಿಯನ್ನು ಪ್ರಾರಂಭ ಮಾಡಲಾಗುವುದು ಎಂದು ಕುಕನೂರು ಪಟ್ಟಣ ಪಂಚಾಯತಿ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳು ಜಂಟಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್