ಕೋಲಾರ, ೨೧ ಮೇ (ಹಿ.ಸ) :
ಆ್ಯಂಕರ್ : ಜಿಲ್ಲೆಯ ೨೦ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಗಣಿತ ವಿಷಯದ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಇಂದು ಒಟ್ಟು ೬೭೫ ಮಂದಿ ಗೈರಾಗಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.
ಈ ಸಂಬ0ಧ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ೨ನೇ ದಿನದ ಈ ಪರೀಕ್ಷೆಯಲ್ಲಿ ೬೭೫ ಮಂದಿ ಗೈರಾಗಿದ್ದು, ಜಿಲ್ಲೆಯಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರ ನಡೆದಿಲ್ಲ, ಎಲ್ಲೂ ಗೊಂದಲಕ್ಕೆ ಅವಕಾಶ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.
ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ ೪೮೯೧ ವಿದ್ಯಾರ್ಥಿಗಳ ಪೈಕಿ ೪೨೧೬ ಮಂದಿ ಹಾಜರಾಗಿದ್ದು, ೬೭೫ ಮಂದಿ ಮಂದಿ ಗೈರಾಗಿದ್ದರು. ಬಂಗಾರಪೇಟೆ ತಾಲ್ಲೂಕಿನ ೪ ಕೇಂದ್ರಗಳಲ್ಲಿ ಗಣಿತ ವಿಷಯಕ್ಕೆ ೯೪೨ ಮಂದಿ ನೊಂದಾಯಿಸಿದ್ದು, ೭೮೨ ಮಂದಿ ಹಾಜರಾಗಿ ೧೬೦ ಮಂದಿ ಗೈರಾಗಿದ್ದಾರೆ, ಕೆಜಿಎಫ್ ತಾಲ್ಲೂಕಿನ ೪ ಕೇಂದ್ರಗಳಲ್ಲಿ ೧೧೭೪ ಮಕ್ಕಳು ಹೆಸರು ನೊಂದಾಯಿಸಿದ್ದು, ೧೦೮೧ ಮಂದಿ ಹಾಜರಾಗಿ ೯೩ ಮಂದಿ ಗೈರಾಗಿದ್ದಾರೆ.
ಕೋಲಾರ ತಾಲ್ಲೂಕಿನ ೫ ಕೇಂದ್ರಗಳಲ್ಲಿ ೧೦೬೧ ಮಂದಿ ಹೆಸರು ನೊಂದಾಯಿಸಿದ್ದು, ೮೯೮ ಮಂದಿ ಹಾಜರಾಗಿ ೧೬೩ ಮಂದಿ ಗೈರಾಗಿದ್ದಾರೆ. ಮಾಲೂರು ತಾಲ್ಲೂಕಿನ ೨ ಕೇಂದ್ರಗಳಲ್ಲಿ೭೩೪ ಮಂದಿ ಹೆಸರು ನೊಂದಾಯಿಸಿದ್ದು, ೬೧೬ ಮಂದಿ ಹಾಜರಾಗಿದ್ದು, ೧೧೮ ಮಂದಿ ಗೈರಾಗಿದ್ದಾರೆ.
ಮುಳಬಾಗಿಲು ತಾಲ್ಲೂಕಿನ ೩ ಕೇಂದ್ರಗಳಲ್ಲಿ ೭೨೧ ಮಂದಿ ನೊಂದಾಯಿಸಿದ್ದು, ೬೨೧ ಮಂದಿ ಹಾಜರಾಗಿದ್ದು, ೧೦೦ ಮಂದಿ ಗೈರಾಗಿದ್ದಾರೆ, ಶ್ರೀನಿವಾಸಪುರ ತಾಲ್ಲೂಕಿನ ೨ ಕೇಂದ್ರಗಳಲ್ಲಿ ೨೫೯ ಮಂದಿ ಹೆಸರು ನೊಂದಾಯಿಸಿದ್ದು, ೨೧೮ ಮಂದಿ ಹಾಜರಾಗಿದ್ದು, ೪೧ ಮಂದಿ ಗೈರಾಗಿದ್ದಾರೆ.
ಮೊದಲ ದಿನದ ಪರೀಕ್ಷೆಯಲ್ಲಿ ಜಿಲ್ಲಾದ್ಯಂತ ಯಾವುದೇ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳು ನಡೆದ ಬಗ್ಗೆ ವರದಿಯಾಗಿಲ್ಲ, ಪರೀಕ್ಷೆ ಸುಗಮವಾಗಿ ನಡೆಸುವಲ್ಲಿ ಜಿಲ್ಲಾಧಿಕಾರಿಗಳು,ಜಿಪಂ ಸಿಇಒ, ಎಸ್ಪಿ ಅವರ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಶಿಕ್ಷಕರು,ಪೋಷಕರು, ವಿದ್ಯಾರ್ಥಿಗಳು ಸಹಕಾರ ನೀಡಿದ್ದಾರೆ ಎಂದರು.
ಬೆಳಗ್ಗೆ ೯-೩೦ರಿಂದಲೇ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ನೀಡಲಾಗಿದ್ದು, ಡಿಡಿಪಿಐ ಕೃಷ್ಣಮೂರ್ತಿ, ಪರೀಕ್ಷಾ ನೋಡೆಲ್ ಅಧಿಕಾರಿ ಸಗೀರಾ ಅಂಜು, ಶಿಕ್ಷಣಾಧಿಕಾರಿ ವೀಣಾ, ಡಿವೈಪಿಸಿಗಳಾದ ಸಹಿದಾ ಫಾತಿಮಾ, ಕೋಲಾರ ತಾಲ್ಲೂಕು ಬಿಇಒ ಮಧುಮಾಲತಿ ಪಡುವಣೆ, ತಾಲ್ಲೂಕುಗಳ ಬಿಇಒಗಳಾದ ಕೃಷ್ಣಮೂರ್ತಿ, ರಾಮಚಂದ್ರಪ್ಪ, ಮುನಿಲಕ್ಷö್ಮಯ್ಯ, ವಿಷಯ ಪರಿವೀಕ್ಷಕರಾದ ಶಂಕರೇಗೌಡ, ಸಮೀವುಲ್ಲಾ, ತಾಂತ್ರಿಕ ಸಹಾಯಕ ಶರಣಪ್ಪ ಜಮಾದಾರ್ ಅಧಿಕಾರಿಗಳು ಜಿಲ್ಲಾದ್ಯಂತ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಿತ್ರ : ಕೋಲಾರದ ನೂತನ ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆ ೨ನೇ ದಿನ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್