ಕಲಬುರಗಿ, 27 ಮೇ (ಹಿ.ಸ.) :
ಆ್ಯಂಕರ್ : ಸ್ಲಂ ಜನರ ಸಾಮಾಜಿಕ ನ್ಯಾಯಕ್ಕಾಗಿ ಮೇ 29 ರಂದು ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನ ಆವರಣದ ಅಖಿಲ ಭಾರತ ಶಿವಾನುಭವ ಮಂಟಪದಲ್ಲಿ ಸ್ಲಂ ಹಬ್ಬ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸ್ಲಂ ಜನಾಂದೋಲನ ಘಟಕದ ಅಧ್ಯಕ್ಷೆ ಗೌರಮ್ಮ ಮಾಕಾ ಹೇಳಿದ್ದಾರೆ.
ಕಲಬುರಗಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ರಾಜ್ಯದ ನಗರ ಪ್ರದೇಶಗಳಲ್ಲಿ ಕೆಳಜಾತಿಯ ಬಡಜನರು ವಾಸಿಸುತ್ತಿದ್ದು, ಸ್ಲಂ ಬಡಾವಣೆಗಳಲ್ಲಿ ವಾಸಿಸುವ ಜನರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ದೊರಕುತ್ತಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಸ್ಲಂ ಏರಿಯಾಗಳಲ್ಲಿ ತಾರತಮ್ಯ ಮಾಡಲಾಗ್ತಿದೆ.. ಹೀಗಾಗಿ ಸ್ಲಂ ಜನರ ಸಾಮಾಜಿಕ ನ್ಯಾಯಕ್ಕಾಗಿ ಸ್ಲಂ ಹಬ್ಬ ಸಮಾವೇಶ ಆಯೋಜಿಸಲಾಗಿದೆಯೆಂದು ಗೌರಮ್ಮ ಮಾಕಾ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಸ್ಲಂ ಜನಾಂದೋಲ ಸಂಘಟನೆಯ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಶರಣು ಹಂಗರಗಿ, ಸಂಚಾಲಕರಾದ ರೇಣುಕಾ ಸರಡಗಿ, ಕಾರ್ಯದರ್ಶಿ ಶರಣು ಸೇರಿದಂತೆ ಇತರರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / Samarth biral