ಕಲಬುರಗಿ, 28 ಮೇ (ಹಿ.ಸ.) :
ಆ್ಯಂಕರ್ : ಮಣಿಕಂಠ್ ರಾಠೋಡ್,
ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನಿಂದಿಸಿದ ಆರೋಪದಡಿ ಬಿಜೆಪಿ ಮುಖಂಡ, ಚಿತ್ತಾಪುರ ಬಿಜೆಪಿ ಪರಾಜಿತ ಅಭ್ಯರ್ಥಿ, ಮಣಿಕಂಠ್ ರಾಠೋಡ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೇ 25 ರಂದು ಫೆಸ್ಬುಕ್ನಲ್ಲಿ ಲೈವ್ನಲ್ಲಿ ಮಾತನಾಡಿದ್ದ ಮಣಿಕಂಠ್ ರಾಠೋಡ್, ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಇತರರನ್ನ ನಿಂದಿಸಿದ್ದರು. ಅವ್ಯಾಚ್ಚ ಶಬ್ದಗಳಿಂದ ನಿಂದಿಸಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತ ಹಣಮಂತ ಎಂಬುವವರು ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ 352/353(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Samarth biral