ಕೊಪ್ಪಳ, 28 ಮೇ (ಹಿ.ಸ.) :
ಆ್ಯಂಕರ್ : ಬಿಜೆಪಿ ನಾಯಕರಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ಬದುಕೇ ನಡೆಯಲ್ಲ, ಕಲಬುರಗಿಯ ಜಿಲ್ಲಾಧಿಕಾರಿಗಳ ಬಗೆಗಿನ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆ ಅತ್ಯಂತ ಖಂಡನೀಯ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಹೇಳಿಕೆ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಪಾಕಿಸ್ತಾನ ಪ್ರೇಮಿ ಬಿಜೆಪಿಗರು ಇಷ್ಟು ದಿನ ರಾಜಕೀಯ ನಾಯಕರ ವಿರುದ್ಧ ಪಾಕಿಸ್ತಾನದ ಹೆಸರು ಪ್ರಯೋಗಿಸುತ್ತಿದ್ದರು, ಈಗ ಅವರ ನಾಲಿಗೆ ಇನ್ನೂ ಉದ್ದವಾಗಿ ಅಧಿಕಾರಿಗಳನ್ನೂ ಪಾಕಿಸ್ತಾನದಿಂದ ಬಂದವರು ಎನ್ನುವ ಮಟ್ಟಿಗೆ ಬಂದಿದೆ. ಇದು ನಿಜಕ್ಕೂ ಕೆಟ್ಟ ಪರಿಣಾಮ ಬೀರುವ ಕ್ರಿಯೆ ಹಾಗೇ ಬಿಜೆಪಿಗರು ಸೇನಾಧಿಕಾರಿಗೆ ಭಯೋತ್ಪಾದಕರ ಸಹೋದರಿ ಎಂದರು.
ಸೈನಿಕರು ಮೋದಿಯ ಕಾಲಿಗೆ ಬೀಳುತ್ತಾರೆ ಎಂದರು, ಸೈನಿಕರ ಪತ್ನಿಯರ ಶೀಲದ ಬಗ್ಗೆ ಸಂಶಯದಿಂದ ಮಾತನಾಡಿದರು ಈಗ ಇಲ್ಲಿ ಜಿಲ್ಲಾಧಿಕಾರಿ ಪಾಕಿಸ್ತಾನದಿಂದ ಬಂದವರು ಎಂದರು. ಬಿಜೆಪಿಗರ ಜ್ಞಾನವು ಪಾಕಿಸ್ತಾನ, ಮುಸ್ಲಿಂ ವಿಚಾರಗಳನ್ನು ದಾಟಿ ಮುಂದೆ ಹೋಗುವುದೇ ಇಲ್ಲ, ಅದಕ್ಕೆ ಕಾರಣ ಅಧಿಕಾರದ ದಾಹ, ಮೋಹ, ಹಣದ ವ್ಯಾಮೋಹ ಎಂಬುದು ಸ್ಪಷ್ಟವಾಗಿದ್ದು, ದೇಶದ ಜನರು ಈಗಲಾದರು ಬಿಜೆಪಿಯ ಮನುವ್ಯಾದಿತನಕ್ಕೆ ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್