ಬಳ್ಳಾರಿ, 28 ಮೇ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಲೈನುಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ನಾಳೆ ಬೆಳಿಗ್ಗೆ 09 ಗಂಟೆಯಿಂದ ಸಂಜೆ ಮಧ್ಯಾಹ್ನ 02 ಗಂಟೆಯವರೆಗೆ ಎಫ್-8 ನ ಬಸವೇಶ್ವರ ನಗರ, ಎಂ.ಅರ್.ವಿ ಲೇಔಟ್, ಸದ್ಗುರು ಕಾಲೋನಿ, ರೇಣುಕಾಚಾರ್ಯ ನಗರ, ಅಲ್ಲಂ ಲೇಔಟ್, ಬಿ.ಎಂ.ಎಸ್ ಲೇಔಟ್, ತಿರುಮಲ ಲೇಔಟ್, ಹರಿಪ್ರಿಯ ನಗರ, ಸುಷ್ಮಸ್ವರಾಜ್ ಕಾಲೋನಿಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್