ಡಿಸಿಸಿ ಬ್ಯಾಂಕ್ ಚುನಾವಣೆ ೮ ಕ್ಷೇತ್ರಗಳ ಫಲಿತಾಂಶ ಪ್ರಕಟ  - ಬ್ಯಾಂಕಿನ ಮಾಜಿ ಅಧ್ಯಕ್ಷ ಗೋವಿಂದಗೌಡ ಪುನರ್ ಆಯ್ಕೆ
ಡಿಸಿಸಿ ಬ್ಯಾಂಕ್ ಚುನಾವಣೆ ೮ ಕ್ಷೇತ್ರಗಳ ಫಲಿತಾಂಶ ಪ್ರಕಟ  - ಬ್ಯಾಂಕಿನ ಮಾಜಿ ಅಧ್ಯಕ್ಷ ಗೋವಿಂದಗೌಡ ಪುನರ್ ಆಯ್ಕೆ
ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ೩ನೇ ಬಾರಿಗೆ ಬ್ಯಾಂಕಿನ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.


ಕೋಲಾರ, ೨೮ ಮೇ (ಹಿ.ಸ) :

ಆ್ಯಂಕರ್ : ರಾಜಕೀಯವಾಗಿ ಪ್ರತಿಷ್ಠೆಯಾಗಿರುವ ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ೧೨ ಮಂದಿ ನಿರ್ದೇಶಕರ ಸ್ಥಾನಗಳಗೆ ಬುಧವಾರ ಮತದಾನ ನಡೆಯಿತು. ಎರಡೂ ಜಿಲ್ಲೆಗಳಲ್ಲಿ ತೀವ್ರ ಕುತೂಹಲ ಮೂಡಿತ್ತು. ಬುಧವಾರ ಸಂಜೆ ೮ ಕ್ಷೇತ್ರಗಳ ಫಲಿತಾಂಶವನ್ನು ಚುನಾವಣಾಧಿಕಾರಿ ಹಾಗೂ ಸಹಾಯಕ ಕಮೀಷನರ್ ಡಾ. ಮೈತ್ರಿ ಪ್ರಕಟಿಸಿದರು. ಆದರೆ ೪ ಕ್ಷೇತ್ರಗಳ ಫಲಿತಾಂಶವನ್ನು ತಡೆ ಹಿಡಿಯಲಾಗಿದೆ.

ಎದುರಾಳಿಗಳಿಗೆ ಸೆಡ್ಡು ಹೊಡೆದು ಬ್ಯಾಂಕಿನ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಬಾರಿ ಬಹುಮತದಿಂದ ಇತರೆ ಸಹಕಾರ ಸಂಘಗಳ ಕ್ಷೇತ್ರದಿಂದ ೨೯ ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಅವರ ಎದುರಾಳಿ ಬಿ.ಆರ್.ಶ್ರೀನಿವಾಸ್ ೧೭ ಮತಗಳನ್ನು ಪಡೆದು ಪರಾಭವ Àಹೊಂದಿದ್ದಾರೆ. ಈಗಾಗಲೇ ಬ್ಯಾಂಕಿನ ಆಡಳಿತ ಮಂಡಳಿಗೆ ಕೆಜಿಎಫ್ ಶಾಸಕಿ ರೂಪಕಲಾ ಶಶಿಧರ್, ಭಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ, ಕೋಲಾರ ಶಾಸಕ ಕೊತ್ತೂರು ಮಂಜುನಾಥ್, ಗೌರಿಬಿದನೂರಿನ ಹನುಂತೇಗೌಡ, ಶಿಡ್ಲಘಟ್ಟದ ನಾಗರಾಜ್ ಹಾಗೂ ಮಾಲೂರು ತಾಲ್ಲೂಕಿನ ದಿನ್ನೇಹಳ್ಳಿ ರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬಂಗಾರಪೇಟೆ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಎನ್.ರಂಗನಾಥಾಚಾರಿ ೮ ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಅವರ ಎದುರಾಳಿ ವಿ.ಮಾರ್ಕೊಂಡೇಗೌಡ ೪ ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಮುಳಬಾಗಿಲು ತಾಲ್ಲೂಕು ಪ್ರಾಥಮಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ವಿ.ರಘುಪತಿರೆಡ್ಡಿ ೧೦ ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಅವರ ಎದುರಾಳಿ ಎಂ.ಸಿ. ಸರ್ವಜ್ಞಗೌಡ ೯ ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಶ್ರೀನಿವಾಸಪುರ ತಾಲ್ಲೂಕು ಪ್ರಾಥಮಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಬಿ.ವಿ.ಸುರೇಶ್‌ರೆಡ್ಡಿ ೨ ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಅವರ ಎದುರಾಳಿ ಬಿ.ಎಸ್.ಶಶಿಕುಮಾರ್ ರವರಿಗೆ ಯಾವುದೇ ಮತಗಳು ಬಂದಿಲ್ಲ.

ಗುಡಿಬAಡೆ ತಾಲ್ಲೂಕು ಪ್ರಾಥಮಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಹೆಚ್.ಎನ್.ಮಂಜುನಾಥರೆಡ್ಡಿ ೫ ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಅವರ ಎದುರಾಳಿ ಕೆ.ಜಿ.ಆನಂದರಡ್ಡಿ ೩ ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಗೌರಿಬಿದನೂರು ತಾಲ್ಲೂಕು ಪ್ರಾಥಮಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಕೆ.ಎನ್.ವೆಂಕಟರಾಮರೆಡ್ಡಿ ೧೭ ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಅವರ ಎದುರಾಳಿ ಹನುಮಂತರೆಡ್ಡಿ ೯ ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಚೇಳೂರು ತಾಲ್ಲೂಕು ಪ್ರಾಥಮಿಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ ಮಂಜುನಾಥರೆಡ್ಡಿ ೪ ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಅವರ ಎದುರಾಳಿ ಬಿ.ಶೇಖರ್ ರವರಿಗೆ ಯಾವುದೇ ಮತಗಳು ಬಂದಿರುವುದಿಲ್ಲ.

ಕೋಲಾರ ಜಿಲ್ಲೆಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಕ್ಷೇತ್ರದಿಂದ ಸ್ಪರ್ಧಿಸಿದ್ದ ಹೆಚ್.ವಿ. ವಿನೋದ್ ಕುಮಾರ್ ೬೫ ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಅವರ ಎದುರಾಳಿ ಕೆ.ಶಿವಾನಂದ ೫೯ ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಬ್ಯಾ0ಕಿನ ಕಾರ್ಯವ್ಯಾಪ್ತಿಗೆ ಬರುವ ಇತರೆ ಸಹಕಾರ ಸಂಘಗಳ ಕ್ಷೇತ್ರದಿಂದ ಎಂ.ಗೋವಿAದಗೌಡ ೨೯ ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಅವರ ಎದುರಾಳಿ ಬಿ.ಆರ್.ಶ್ರೀನಿವಾಸ್ ೧೭ ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ.

ಚಿತ್ರ : ಕೋಲಾರ ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ೩ನೇ ಬಾರಿಗೆ ಬ್ಯಾಂಕಿನ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande