ಬಲ್ಡೋಟಾ ಕಾರ್ಖಾನೆ ವಿರುದ್ಧ ಜನರೊಂದಿಗೆ ಹೋರಾಟ
ಕೊಪ್ಪಳ, 28 ಮೇ (ಹಿ.ಸ.) ಆ್ಯಂಕರ್: ಕೊಪ್ಪಳ ನಗರದ ಪಕ್ಕದಲ್ಲಿಯೇ ಬಲ್ಡೋಟಾ ಕಾರ್ಖಾನೆ ಹಾಕುತ್ತಿರುವದನ್ನು ವಿರೋಧಿಸಿ ಹಲವು ಹಂತದ ಹೋರಾಟಗಳು ನಡೆದಿದ್ದು, ಜನರ ಆರೋಗ್ಯಕ್ಕೆ ಮಾರಕವಾಗಿರುವ ಎಲ್ಲಾ ಕಂಪನಿಗಳನ್ನು ಕೊಪ್ಪಳದಿಂದ ಒದ್ದೋಡಿಸಲು `ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ
ಬಲ್ಡೋಟಾ ಕಾರ್ಖಾನೆ ವಿರುದ್ಧ ಜನರೊಂದಿಗೆ ಹೋರಾಟ


ಬಲ್ಡೋಟಾ ಕಾರ್ಖಾನೆ ವಿರುದ್ಧ ಜನರೊಂದಿಗೆ ಹೋರಾಟ


ಕೊಪ್ಪಳ, 28 ಮೇ (ಹಿ.ಸ.)

ಆ್ಯಂಕರ್: ಕೊಪ್ಪಳ ನಗರದ ಪಕ್ಕದಲ್ಲಿಯೇ ಬಲ್ಡೋಟಾ ಕಾರ್ಖಾನೆ ಹಾಕುತ್ತಿರುವದನ್ನು ವಿರೋಧಿಸಿ ಹಲವು ಹಂತದ ಹೋರಾಟಗಳು ನಡೆದಿದ್ದು, ಜನರ ಆರೋಗ್ಯಕ್ಕೆ ಮಾರಕವಾಗಿರುವ ಎಲ್ಲಾ ಕಂಪನಿಗಳನ್ನು ಕೊಪ್ಪಳದಿಂದ ಒದ್ದೋಡಿಸಲು `ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆ’ ಜಂಟಿ ಕ್ರಿಯಾ ವೇದಿಕೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಜಂಟಿ ಕ್ರಿಯಾ ವೇದಿಕೆ ಸಭೆಯಲ್ಲಿ ಬಲ್ಡೋಟಾದ ಎಂಎಸ್‍ಪಿಲ್‍ನ ಬಿಎಸ್‍ಪಿಎಲ್ ಕಾರ್ಖಾನೆ ವಿರುದ್ಧ ಹೋರಾಟದ ರೂಪರೇಷೆ ಸಿದ್ದಪಡಿಸುವ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಅಂತಿಮ ನಿರ್ಣಯ ತೆಗೆದುಕೊಂಡಿದ್ದು ಹಲವು ಹೋರಾಟಕ್ಕೆ ಕೊಪ್ಪಳ ಮತ್ತು ಭಾದಿತ ಪ್ರದೇಶದ ಜನರನ್ನು ಸಜ್ಜುಗೊಳಿಸಲು ನಿರ್ಣಯ ತೆಗೆದುಕೊಳ್ಳಲಾಯಿತು.

ಕೊಪ್ಪಳದ 31 ಮತ್ತು ಭಾಗ್ಯನಗರದ 19 ಹಾಗೂ ಸುಮಾರು 30 ಗ್ರಾಮಗಳಲ್ಲಿ ಪರಿಸರ ಜಾಗೃತಿ ಸಭೆ ನಡೆಸುವದು. ನಗರದ ಅಶೋಕ ವೃತ್ತದಲ್ಲಿ ನಿರಂತರ ಧರಣಿ ಸತ್ಯಾಗ್ರಹ ಹಮ್ಮಿಕೊಂಡು ಪ್ರತಿಯೊಂದು ಸಂಘಟನೆಗಳನ್ನು ಅದರಲ್ಲಿ ತೊಡಗಿಸಿಕೊಳ್ಳುವದು. ಕ್ಷೇತ್ರದ ಸುಮಾರು 30 ಸಾವಿರ ಕುಟುಂಬಗಳಿಂದ, ವಿದ್ಯಾರ್ಥಿಗಳಿಂದ ರಾಷ್ಟ್ರಪತಿಗಳು, ಮುಖ್ಯಮಂತ್ರಿಗಳು, ಹಸಿರು ನ್ಯಾಯಾಧಿಕರಣಕ್ಕೆ ಮತ್ತು ಬಲ್ಡೋಟಾ ಮಾಲಿಕರಿಗೆ ಸುಮಾರು ಒಂದು ಲಕ್ಷ ಪತ್ರ ಬರೆಸುವ ಮೂಲಕ ಪತ್ರ ಚಳುವಳಿ ನಡೆಸುವದು.

ಕೊಪ್ಪಳ ಜಿಲ್ಲಾ ಆಫ್‍ಸೆಟ್ ಪ್ರಿಂಟರ್ಸ್ ಅಸೋಸಿಯೇಷನ್ ಅವರಿಂದ ಪೋಸ್ಟರ್ ಜಾಗೃತಿ ಅಭಿಯಾನ ನಡೆಸುವದು. ಕೊಪ್ಪಳದಿಂದ ಗಿಣಿಗೇರಾವರೆಗೆ ಸೈಕಲ್ ಜಾಥಾ ಹಾಗೂ ಕೊಪ್ಪಳ ಕಾರ್ಖಾನೆಗಳಿಂದ ಆಗುತ್ತಿರುವ ಪರಿಸರ ಹಾನಿ ಕುರಿತು ರಾಜ್ಯಮಟ್ಟದ ಕಿರುಚಿತ್ರ ಸ್ಪರ್ಧೆ ಏರ್ಪಡಿಸುವದು ಸೇರಿದಂತೆ ಹಲವು ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು, ಪೇಂಟ್ ಅಭಿಯಾನ ಮುಗಿದ ತಕ್ಷಣ ಹಂತ ಹಂತವಾಗಿ ಜಾರಿಗೆ ತರಲು ಸಭೆ ಒಕ್ಕೋರಲ ನಿರ್ಣಯ ತೆಗೆದುಕೊಂಡಿದ್ದು, ವಿವಿಧ ಕಾರ್ಯಕ್ರಮಗಳಿಗೆ ಪ್ರತ್ಯೇಕ ಸಮಿತಿ ರಚಿಸಿ ಜವಾಬ್ದಾರಿ ನೀಡಲು ಸಭೆ ಒಪ್ಪಿದೆ.

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆಯ ಪ್ರಮುಖರುಗಳಾದ ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಸೋಮರಡ್ಡಿ ಅಳವಂಡಿ, ಬಸವರಾಜ ಶೀಲವಂತರ, ರಮೇಶ ತುಪ್ಪದ, ಮಹಾಂತೇಶ ಕೊತಬಾಳ, ಮಂಜುನಾಥ ಜಿ. ಗೊಂಡಬಾಳ, ಶರಣು ಗಡ್ಡಿ, ಡಾ. ಮಂಜುನಾಥ ಸಜ್ಜನ್, ಸಂತೋಷ ದೇಶಪಾಂಡೆ, ಮುದುಕಪ್ಪ ಹೊಸಮನಿ, ಶಿವಕುಮಾರ ಕುಕನೂರ, ಶರಣು ಪಾಟೀಲ, ಶರಣು ಡೊಳ್ಳಿನ, ಕೇಶವ ಕಟ್ಟಿಮನಿ, ಎಸ್. ಎ. ಗಫಾರ್, ಮಖಬುಲ್ ರಾಯಚೂರ ಇತರರು ಇದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande