ಎಸ್.ಎಸ್.ಎಲ್.ಸಿ. ದ್ವಿತೀಯ ಭಾಷೆ ವಿಷಯಕ್ಕೆ ೫೮೫ ಮಂದಿ ವಿದ್ಯಾರ್ಥಿಗಳು ಗೈರು ಹಾಜರು
ಎಸ್.ಎಸ್.ಎಲ್.ಸಿ. ದ್ವಿತೀಯ ಭಾಷೆ ವಿಷಯಕ್ಕೆ ೫೮೫ ಮಂದಿ ವಿದ್ಯಾರ್ಥಿಗಳು ಗೈರು ಹಾಜರು
ಕೋಲಾರದ ನೂತನ ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆಪತ್ರಿಕೆ ವಿತರಣೆಗೂ ಮುನ್ನಾ ದ್ವಿತೀಯ ಭಾಷಾ ಪರೀಕ್ಷೆ ಬರೆಯಲು ಸಿದ್ದರಾಗಿ ಕುಳಿತಿರುವ ವಿದ್ಯಾರ್ಥಿಗಳು.


ಕೋಲಾರ, ೨೮ ಮೇ (ಹಿ.ಸ) :

ಆ್ಯಂಕರ್ : ಜಿಲ್ಲೆಯ ೨೦ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿಪರೀಕ್ಷೆ-೨ರ ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ ವಿಷಯದ ಪರೀಕ್ಷೆ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು ೫೮೫ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.

ಪರೀಕ್ಷೆ ಮುಗಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ದ್ವಿತೀಯ ಭಾಷೆಯಾಗಿ ಇಂಗ್ಲೀಷ್, ಕನ್ನಡ ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ ೩೪೪೨ ವಿದ್ಯಾರ್ಥಿಗಳ ಪೈಕಿ ೨೮೫೭ ಮಂದಿ ಹಾಜರಾಗಿದ್ದು, ೫೮೫ ಮಂದಿ ಗೈರಾಗಿದ್ದರು. ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೇ ಸುಗಮವಾಗಿ ನಡೆದಿದೆ ಎಂದು ತಿಳಿಸಿದರು.

ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ-೨ ಇದಾಗಿದ್ದು, ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮಾರ ಸುಸ್ಥಿತಿಯಲ್ಲಿಡಲಾಗಿದ್ದು, ಪರೀಕ್ಷಾ ಅವಧಿಯಲ್ಲಿ ವೆಬ್ ಕಾಸ್ಟಿಂಗ್ ಮೂಲಕ ಅಧಿಕಾರಿಗಳು ವೀಕ್ಷಿಸುತ್ತಿದ್ದು, ಯಾವುದೇ ಲೋಪ ಕಂಡು ಬರಲಿಲ್ಲ ಎಂದರು.

ಬAಗಾರಪೇಟೆ ತಾಲ್ಲೂಕಿನ ೪ ಕೇಂದ್ರಗಳಲ್ಲಿ ದ್ವಿತೀಯ ಭಾಷೆ ವಿಷಯಕ್ಕೆ ೬೫೩ ಮಂದಿ ನೊಂದಾಯಿಸಿದ್ದು, ೫೧೯ ಮಂದಿ ಹಾಜರಾಗಿ ೧೩೪ ಮಂದಿ ಗೈರಾಗಿದ್ದಾರೆ, ಕೆಜಿಎಫ್ ತಾಲ್ಲೂಕಿನ ೪ ಕೇಂದ್ರಗಳಲ್ಲಿ ೮೯೧ ಮಕ್ಕಳು ಹೆಸರು ನೊಂದಾಯಿಸಿದ್ದು, ೭೯೪ ಮಂದಿ ಹಾಜರಾಗಿ ೯೭ ಮಂದಿ ಗೈರಾಗಿದ್ದಾರೆ.

ಕೋಲಾರ ತಾಲ್ಲೂಕಿನ ೫ ಕೇಂದ್ರಗಳಲ್ಲಿ ೬೬೧ ಮಂದಿ ಹೆಸರು ನೊಂದಾಯಿಸಿದ್ದು, ೫೨೮ ಮಂದಿ ಹಾಜರಾಗಿ ೧೩೩ ಮಂದಿ ಗೈರಾಗಿದ್ದಾರೆ. ಮಾಲೂರು ತಾಲ್ಲೂಕಿನ ೨ ಕೇಂದ್ರಗಳಲ್ಲಿ ೪೬೭ ಮಂದಿ ಹೆಸರು ನೊಂದಾಯಿಸಿದ್ದು, ೩೬೯ ಮಂದಿ ಹಾಜರಾಗಿದ್ದು, ೯೮ ಮಂದಿ ಗೈರಾಗಿದ್ದಾರೆ.

ಮುಳಬಾಗಿಲು ತಾಲ್ಲೂಕಿನ ೩ ಕೇಂದ್ರಗಳಲ್ಲಿ ೫೯೦ ಮಂದಿ ನೊಂದಾಯಿಸಿದ್ದು, ೪೯೪ ಮಂದಿ ಹಾಜರಾಗಿದ್ದು, ೯೬ ಮಂದಿ ಗೈರಾಗಿದ್ದಾರೆ, ಶ್ರೀನಿವಾಸಪುರ ತಾಲ್ಲೂಕಿನ ೨ ಕೇಂದ್ರಗಳಲ್ಲಿ ೧೮೦ ಮಂದಿ ಹೆಸರು ನೊಂದಾಯಿಸಿದ್ದು, ೧೫೩ ಮಂದಿ ಹಾಜರಾಗಿದ್ದು, ೨೭ ಮಂದಿ ಗೈರಾಗಿದ್ದಾರೆ.

ಮೂರನೇ ದಿನದ ಪರೀಕ್ಷೆಯಲ್ಲಿ ಜಿಲ್ಲಾದ್ಯಂತ ಯಾವುದೇ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳು ನಡೆದ ಬಗ್ಗೆ ವರದಿಯಾಗಿಲ್ಲ, ಪರೀಕ್ಷೆ ಸುಗಮವಾಗಿ ನಡೆಸುವಲ್ಲಿ ಜಿಲ್ಲಾಧಿಕಾರಿಗಳು,ಜಿಪಂ ಸಿಇಒ, ಎಸ್ಪಿ ಅವರ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಶಿಕ್ಷಕರು,ಪೋಷಕರು, ವಿದ್ಯಾರ್ಥಿಗಳು ಸಹಕಾರ ನೀಡಿದ್ದಾರೆ ಎಂದರು.

ಡಿಡಿಪಿಐ ಕೃಷ್ಣಮೂರ್ತಿ, ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಸಗೀರಾ ಅಂಜುA, ಶಿಕ್ಷಣಾಧಿಕಾರಿ ವೀಣಾ, ಡಿವೈಪಿಸಿ ರಾಜೇಶ್ವರಿ, ಬಿಇಒಗಳಾದ ಮಧುಮಾಲತಿ ಪಡುವಣೆ, ವಿವಿಧ ತಾಲ್ಲೂಕುಗಳ ಬಿಇಒಗಳಾದ ಗುರುಮೂರ್ತಿ ರಾಮಚಂದ್ರಪ್ಪ, ಮುನಿಲಕ್ಷö್ಮಯ್ಯ, ವಿಷಯ ಪರಿವೀಕ್ಷಕರಾದ ಶಂಕರೇಗೌಡ, ಸಮೀವುಲ್ಲಾ,ವೆಂಕಟೇಶಬಾಬು, ತಾಲ್ಲೂಕು ಪರೀಕ್ಷಾ ನೋಡಲ್ ಅಧಿಕಾರಿಗಳಾದ ಸಿ.ಎಂ.ವೆAಕಟರಮಣಪ್ಪ, ಲಕ್ಷಿö್ಮÃಕಾಂತ್, ಸೋಮಶೇಖರ್, ವೆಂಕಟಸ್ವಾಮಿ, ಕಾರ್ತಿಕ್, ಲಕ್ಷಿö್ಮÃನಾರಾಯಣ ಮತ್ತಿತರ ಅಧಿಕಾರಿಗಳು ಜಿಲ್ಲಾದ್ಯಂತ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚಿತ್ರ : ಕೋಲಾರದ ನೂತನ ಸರ್ಕಾರಿ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆಪತ್ರಿಕೆ ವಿತರಣೆಗೂ ಮುನ್ನಾ ದ್ವಿತೀಯ ಭಾಷಾ ಪರೀಕ್ಷೆ ಬರೆಯಲು ಸಿದ್ದರಾಗಿ ಕುಳಿತಿರುವ ವಿದ್ಯಾರ್ಥಿಗಳು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande