ಬಳ್ಳಾರಿ, 28 ಮೇ (ಹಿ.ಸ.) :
ಆ್ಯಂಕರ್ : ಭಾರತೀಯ ರೆಡ್ಕ್ರಾಸ್ ಸಂಸ್ಥೆ, ರಾಜ್ಯ ಶಾಖೆ ಬೆಂಗಳೂರು ವತಿಯಿಂದ ಜೂ.14 ರಂದು “ವಿಶ್ವ ರಕ್ತದಾನಿಗಳ ದಿನಾಚಾರಣೆ” ಅಂಗವಾಗಿ 25 ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದವರಿಗೆ ಕರ್ನಾಟಕ ರಾಜ್ಯ ರೆಡ್ಕ್ರಾಸ್ ಸಂಸ್ಥೆಯಿಂದ ಸನ್ಮಾನ ಮಾಡಲಾಗುತ್ತಿದ್ದು, ಜಿಲ್ಲೆಯ ಅರ್ಹ ರಕ್ತದಾನಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬಳ್ಳಾರಿ ಶಾಖೆಯ ಕಾರ್ಯದರ್ಶಿ ಎಂ.ಎ.ಷಕೀಬ್ ತಿಳಿಸಿದ್ದಾರೆ.
ಆಸಕ್ತ 25 ಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ ವ್ಯಕ್ತಿಗಳು ತಮ್ಮ ರಕ್ತದಾನ ಮಾಡಿದ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಯನ್ನು ನಗರದ ಜಿಲ್ಲಾ ನ್ಯಾಯಾಲಯ ರಸ್ತೆಯ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಬಳ್ಳಾರಿ ಜಿಲ್ಲಾ ಶಾಖೆಗೆ ಮೇ 30 ಸಂಜೆ 05 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಸನ್ಮಾನ ಮಾಡಿರುವ ವ್ಯಕ್ತಿಗಳು ಅರ್ಹರಾಗಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ.9886173411 ಗೆ ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್