ರಾಯಚೂರು, 28 ಮೇ (ಹಿ.ಸ.) :
ಆ್ಯಂಕರ್ : ಮೀನುಗಾರಿಕೆ ಇಲಾಖೆಯಿಂದ ಜಿಲ್ಲೆಯ ಮಾನವಿ ತಾಲ್ಲೂಕಿನ ತುಂಗಾಭದ್ರಾ ನದಿಭಾಗದಲ್ಲಿ ಮೀನು ಹಿಡಿಯಲು ಪರವಾನಿಗೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ತುಂಗಾಭದ್ರಾ ನದಿ ಭಾಗದ ಆಯನೂರ ನಿಂದ ದದ್ದಲ್ವರೆಗೆ ಮೀನು ಹಿಡಿಯಲು ಪರವಾನಿಗೆಗಾಗಿ ಸ್ಥಳೀಯ ಮೀನುಗಾರರು ವಾಸಸ್ಥಳ ಗುರುತಿನ ಚೀಟಿಯೊಂದಿಗೆ ನಿಗದಿತ ಶುಲ್ಕ ಪಾವತಿಸಿ ಜೂನ್ 92ರಿಂದ ಜೂನ್ 30ರ ಪರವಾನಿಗೆಯನ್ನು ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರು ರಾಯಚೂರು ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕ ಮಾಡಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್