ಬಳ್ಳಾರಿ, 28 ಮೇ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗಡಿಗಿ ಚೆನ್ನಪ್ಪ ವೃತ್ತದಿಂದ ಇಂದಿರಾ ವೃತ್ತದವರೆಗಿನ ರಸ್ತೆ, ವೃತ್ತ, ಗಡಿಗಿ ಚೆನ್ನಪ್ಪ ವೃತ್ತದಿಂದ ಈಡಿಗ ಹಾಸ್ಟೇಲ್ ವರೆಗಿನ ರಸ್ತೆ ಹಾಗೂ ವೀಕ್ಷಕರ ಗ್ಯಾಲರಿ ಕಾಮಗಾರಿಗಳನ್ನು ಶಾಸಕ ನಾರಾ ಭರತರೆಡ್ಡಿ ಅವರು ಬುಧವಾರ ಭೇಟಿ ಮಾಡಿ, ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಆದೇಶ ನೀಡಿದ್ದಾರೆ.
ಆ ನಂತರ ಎಪಿಎಂಸಿಯಿಂದ ಹೆಚ್.ಆರ್. ಗವಿಯಪ್ಪ ವೃತ್ತದವರೆಗಿನ ರಸ್ತೆ ಅಗಲೀಕರಣ ಮತ್ತು ಸುಂದರೀಕರಣ ಕಾಮಗಾರಿಯನ್ನು ಕೂಡ ವೀಕ್ಷಿಸಿದರು.
ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾದ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೇಮರಾಜ್, ಎಇಇ ಸುದರ್ಶನ್ ರೆಡ್ಡಿ, ಮಹಾನಗರ ಪಾಲಿಕೆಯ ಇಇ ಗೋವರ್ಧನ್ ಹಾಗೂ ಮಹಾನಗರ ಪಾಲಿಕೆಯ ಸದಸ್ಯರು, ಗುತ್ತಿಗೆದಾರರು ಹಾಜರಿದ್ದರು. ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್