ನೆರೆ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ : ಸಂತೋಷ ಲಾಡ್
ಹುಬ್ಬಳ್ಳಿ, 28 ಮೇ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ನೆರೆ ಪ್ರವಾಹ ಉಂಟಾಗುವ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ನೆರೆ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅತೀ ಹೆಚ್ಚ
Lad


ಹುಬ್ಬಳ್ಳಿ, 28 ಮೇ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ನೆರೆ ಪ್ರವಾಹ ಉಂಟಾಗುವ ಹಳ್ಳಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ. ನೆರೆ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅತೀ ಹೆಚ್ಚು ಮಳೆಯಿಂದ ಬೆಣ್ಣೆ ಹಳ್ಳ ಹಾಗೂ ತುಪ್ಪರಿ ಹಳ್ಳಗಳು ಪ್ರವಾಹವನ್ನು ಉಂಟು ಮಾಡುತ್ತವೆ. ರೂ.200 ಕೋಟಿ ವೆಚ್ಚದಲ್ಲಿ ಬೆಣ್ಣೆ ಹಳ್ಳ ಮತ್ತು ತುಪ್ಪರಿ ಹಳ್ಳಗಳ ಹೂಳೆತ್ತುವ ಕಾರ್ಯವನ್ನು ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಕೈಗೊಳ್ಳಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ, ಇಂಗಳಹಳ್ಳಿ ಗ್ರಾಮಗಳಲ್ಲಿ ನೆರೆ ಪ್ರವಾಹ ಉಂಟಾಗುವ ಸಾಧ್ಯತೆ ಇರುವ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಬೆಣ್ಣೆ ಹಳ್ಳ ಹಾಗೂ ತುಪ್ಪರಿ ಹಳ್ಳ ಹೂಳೆತ್ತುವ ಕಾರ್ಯಕ್ಕೆ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳಲ್ಲಿ ಅನುದಾನ ನೀಡುವಂತೆ ಕೋರಲಾಗಿತ್ತು. ಅದರಂತೆ ಬಜೆಟ್ ನಲ್ಲಿ ರೂ.200 ಕೋಟಿ ಹಣವನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಮುಗಿದ ಬಳಿಕ ಹೂಳೆತ್ತುವ ಕಾರ್ಯವನ್ನು ಆರಂಭಿಸಲಾಗುವುದು ಎಂದರು.

ಮುಂದಿನ 5 ರಿಂದ 10 ವರ್ಷಗಳ ಕಾಲ ಯಾವುದೇ ರೀತಿಯ ಸಮಸ್ಯೆ ಉದ್ಭವಿಸುವುದಿಲ್ಲ. ಬೆಣ್ಣೆ ಹಳ್ಳ ಮತ್ತು ತುಪ್ಪರಿ ಹಳ್ಳಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ನೆರೆ ಪ್ರವಾಹ ಸಂಭವಿಸುವ ಹಳ್ಳಿಗಳನ್ನು ಗುರುತಿಸಲಾಗಿದೆ. ಪ್ರವಾಹದಿಂದಾಗಿ ಯಾವುದೇ ರೀತಿಯ ಜೀವಹಾನಿ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಲ್ಲದೇ ಟಾಸ್ಕ ಫೋರ್ಸ್ ತಂಡವನ್ನು ರಚನೆ ಮಾಡಲಾಗುವುದು. ಟಾಸ್ಕ ಫೋರ್ಸ್ ತಂಡಕ್ಕೆ ಲೈಫ್ ಜಾಕೆಟ್ ಸೇರಿದಂತೆ ಅಗತ್ಯ ಸಲಕರಣೆಗಳನ್ನು ಒದಗಿಸಲಾಗುತ್ತದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande