ಬೆಂಗಳೂರು, 28 ಮೇ (ಹಿ.ಸ.) :
ಆ್ಯಂಕರ್ : ಕನ್ನಡ ತಮಿಳಿನಿಂದ ಹುಟ್ಟಿದೆ ಎಂಬ ನಟ ಕಮಲ್ ಹಾಸನ್ ಅವರ ಹೇಳಿಕೆಗೆ ಪ್ರತಿಪಕ್ಷ ನಾಯಕ ಆರ್. ಅಶೋಕ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಹೇಳಿಕೆ 7 ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ರಾಹುಲ್ ಗಾಂಧಿ ಮತ್ತು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮುಖಾಂತರ ಕಮಲ್ ಹಾಸನ್ ಅವರ ಕಿವಿ ಹಿಂಡಿಸಲು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಮುಂದೆ ಬರಬಹುದೇ ಎಂದು ಪ್ರಶ್ನಿಸಿದ್ದಾರೆ.
ಇನ್ನೆಂದೂ ಕನ್ನಡ ನುಡಿ-ನಾಡು ಬಗ್ಗೆ ಅವಹೇಳನಕಾರಿ ಹೇಳಿಕೆ ಬಾರದಂತೆ ಎಚ್ಚರಿಕೆ ನೀಡಲಿ. ಅಥವಾ ಕಾಂಗ್ರೆಸ್ಗೆ ಕನ್ನಡಕ್ಕಿಂತ ಹೈಕಮಾಂಡ್ ಭಕ್ತಿ ಹಾಗೂ ರಾಜಕೀಯ ಮೈತ್ರಿಯೇ ಮುಖ್ಯವಾಗಲಿದೆಯಾ ಎಂದು ಪ್ರಶ್ನಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa