ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ರಾಜಿ ಇಲ್ಲ : ಸಿದ್ದರಾಮಯ್ಯ
ಬೆಂಗಳೂರು, 28 ಮೇ (ಹಿ.ಸ.) : ಆ್ಯಂಕರ್ : ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿ
Cm


Cm


ಬೆಂಗಳೂರು, 28 ಮೇ (ಹಿ.ಸ.) :

ಆ್ಯಂಕರ್ : ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ ತಾಯಿಯಷ್ಟೇ ಸ್ಮರಣೀಯರು ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಟೌನ್ ಹಾಲ್ ನಲ್ಲಿ ಆಯೋಜಿಸಿದ್ದ ಬೃಹತ್ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ ಪುರಸ್ಕರಿಸಿ ಮಾತನಾಡಿದರು.

ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದರು.

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande