ಜಮ್ಮು, 29 ಮೇ (ಹಿ.ಸ.) :
ಆ್ಯಂಕರ್ : ಆಪರೇಷನ್ ಸಿಂಧೂರ್ ನಂತರ ಗೃಹ ಸಚಿವ ಅಮಿತ್ ಶಾ ಜಮ್ಮುವಿಗೆ ಇಂದು ಎರಡು ದಿನಗಳ ಪ್ರವಾಸಕ್ಕೆ ಆಗಮಿಸುತ್ತಿದ್ದಾರೆ. ಸಂಜೆ 5ಕ್ಕೆ ಅವರು ಜಮ್ಮು ವಿಮಾನ ನಿಲ್ದಾಣ ತಲುಪಲಿದ್ದು, ಭದ್ರತಾ ಸಂಸ್ಥೆಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಸೇನೆ ಹಾಗೂ ಗುಪ್ತಚರ ಸಂಸ್ಥೆಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಸಭೆಯಲ್ಲಿ ಆಪರೇಷನ್ ಸಿಂಧೂರ್ ನಂತರದ ಪರಿಸ್ಥಿತಿ, ಅಮರನಾಥ ಯಾತ್ರೆಯ ಭದ್ರತೆ, ಗಡಿ ಪ್ರದೇಶದ ಬಂಕರ್ ಯೋಜನೆಗಳು ಮತ್ತು ಪಾಕಿಸ್ತಾನಿ ಶೆಲ್ ದಾಳಿಗಳ ಬಗ್ಗೆ ಚರ್ಚೆ ನಡೆಯಲಿದೆ. ಶುಕ್ರವಾರ ಶಾ ಅವರು ಪೂಂಚ್ ಜಿಲ್ಲೆಗೆ ಭೇಟಿ ನೀಡಿ ಶೆಲ್ ದಾಳಿಯಿಂದ ಹಾನಿಗೊಳಗಾದ ಸ್ಥಳಗಳ ಪರಿಶೀಲನೆ ನಡೆಸಿ, ಪೀಡಿತರ ಕುಟುಂಬಗಳನ್ನು ಭೇಟಿಯಾಗಲಿದ್ದಾರೆ.
ಭಯೋತ್ಪಾದಕರ ಚಟುವಟಿಕೆ ಹೆಚ್ಚಿರುವ ದೋಡಾ, ಕಿಶ್ತ್ವಾರ್, ಕಥುವಾ, ಉಧಂಪುರ, ರಾಜೌರಿ ಮತ್ತು ಪೂಂಚ್ ಪ್ರದೇಶಗಳಲ್ಲಿ ಭದ್ರತಾ ವ್ಯವಸ್ಥೆ ಕಠಿಣಗೊಳಿಸುವ ಚರ್ಚೆ ನಡೆಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa