ಶ್ರವಣಬೆಳಗೊಳ ಕ್ಷೇತ್ರದ ಬಿಜೆಪಿ–ಜೆಡಿಎಸ್ ಕಾರ್ಯಕರ್ತರ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, 29 ಮೇ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯ ಶ್ರವಣಬೆಳಗೊಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅನೇಕ ಕಾರ್ಯಕರ್ತರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆತ್ಮೀಯವಾಗಿ ಸ್ವಾಗತಿಸಿ ಪಕ
Party join


ಬೆಂಗಳೂರು, 29 ಮೇ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯ ಶ್ರವಣಬೆಳಗೊಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅನೇಕ ಕಾರ್ಯಕರ್ತರು ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆತ್ಮೀಯವಾಗಿ ಸ್ವಾಗತಿಸಿ ಪಕ್ಷದ ಧ್ವಜ ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ ಎಂದು ಹೇಳಿ, ಪಕ್ಷದ ಜನಪರ ನಿಲುವುಗಳನ್ನು ತಿಳಿಸಿದರು. “ಕೃಷಿ ಜಮೀನಿನ ಕಾಯ್ದೆ, ಬ್ಯಾಂಕುಗಳ ರಾಷ್ಟ್ರೀಕರಣ, ಆಹಾರ ಭದ್ರತಾ ಕಾಯಿದೆ ಸೇರಿದಂತೆ ಅನೇಕ ಜನಪರ ಯೋಜನೆಗಳು ಕಾಂಗ್ರೆಸ್‌ನ ಕೊಡುಗೆ,” ಎಂದರು.

ನಾವು ಚುನಾವಣೆಗೂ ಮುನ್ನ ನುಡಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ವಾರ್ಷಿಕ ₹52,000 ಕೋಟಿ ನೇರವಾಗಿ ಜನರ ಖಾತೆಗೆ ಜಮೆ ಆಗುವಂತೆ ಮಾಡಿದ್ದೇವೆ. ಬಿಜೆಪಿಯವರು ಇಂತಹ ಕಾರ್ಯಕ್ರಮ ರೂಪಿಸಿಲ್ಲ. ಅವರು ದೇವರು-ಧರ್ಮದ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ, ಆದರೆ ಕಾಂಗ್ರೆಸ್ ಜನರ ಬದುಕು ಉತ್ತಮಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಶ್ರವಣಬೆಳಗೊಳದ ಕಾರ್ಯಕರ್ತರು ತಮ್ಮ ಹಳೆಯ ನಾಯಕರಿಂದ ನಿರಾಶರಾದ ಕಾರಣವಾಗಿ ಕಾಂಗ್ರೆಸ್ ಪಕ್ಷವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande