15 Jun 2025, 18:04 HRS IST

ದೃಶ್ಯಕಲಾ ಮಹಾವಿದ್ಯಾಲಯ ವಜ್ರ ಮಹೋತ್ಸವ ಸಮಾರೋಪ ಸಮಾರಂಭ
ದಾವಣಗೆರೆ, 29 ಮೇ (ಹಿ.ಸ.) : ಆ್ಯಂಕರ್ : ದಾವಣಗೆರ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದ ವಜ್ರ ಮಹೋತ್ಸವ ಸಮಾರೋಪ ಸಮಾರಂಭ ಮತ್ತು ರಾಷ್ಟ್ರೀಯ ಮಟ್ಟದ ಕಾರ್ಯಾಗಾರವನ್ನು ಮೇ30 ಮತ್ತು 31 ರಂದು ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದೆ. ಮೇ.30 ರಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ವಿಧಾನಸಭಾ ಶಾಸಕ
ದೃಶ್ಯಕಲಾ ಮಹಾವಿದ್ಯಾಲಯ ವಜ್ರ ಮಹೋತ್ಸವ ಸಮಾರೋಪ ಸಮಾರಂಭ


ದಾವಣಗೆರೆ, 29 ಮೇ (ಹಿ.ಸ.) :

ಆ್ಯಂಕರ್ : ದಾವಣಗೆರ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದ ವಜ್ರ ಮಹೋತ್ಸವ ಸಮಾರೋಪ ಸಮಾರಂಭ ಮತ್ತು ರಾಷ್ಟ್ರೀಯ ಮಟ್ಟದ ಕಾರ್ಯಾಗಾರವನ್ನು ಮೇ30 ಮತ್ತು 31 ರಂದು ಕಾಲೇಜಿನ ಆವರಣದಲ್ಲಿ ಏರ್ಪಡಿಸಲಾಗಿದೆ.

ಮೇ.30 ರಂದು ಬೆಳಿಗ್ಗೆ 11 ಗಂಟೆಗೆ ದಕ್ಷಿಣ ವಿಧಾನಸಭಾ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಸಮಾರೋಪ ಸಮಾರಂಭವನ್ನು ಉದ್ಘಾಟಿಸುವರು. ದಾವಣಗೆರೆ ವಿವಿ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸುವರು.

ಮುಖ್ಯಅತಿಥಿಗಳಾಗಿ ಮುಂಬಯಿಯ ಓಗಿಲ್ವಿ ಸಂಸ್ಥೆಯ ಕ್ರಿಯೇಟಿವ್ ಡೈರೆಕ್ಟರ್ ಹರೀಶ್ ಆಚಾರ್ಯ ಭಾಗವಹಿಸುವರು. ಪರೀಕ್ಷಾಂಗ ಕುಲಸಚಿವರಾದ ಶಬ್ಬೀರ್ ಭಾಷಗಂಟಿ, ಪ್ರೊ.ಸಿ.ಕೆ.ರಮೇಶ, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ್ರ, ಪ್ರಾಚಾರ್ಯರರಾದ ಡಾ.ಜೈರಾಜ್ ಎಂ. ಚಿಕ್ಕಪಾಟೀಲ್ ಪಾಲ್ಗೊಳ್ಳುವರು. ಹಾಗೂ ಮಧ್ಯಾಹ್ನ 12 ಗಂಟೆಯಿಂದ ರಾಷ್ಟ್ರೀಯ ಸಮ್ಮೇಳನ, ಕಾರ್ಯಾಗಾರ, ಪ್ರಾತ್ಯಕ್ಷಕೆ, ಸಾಂಸ್ಕøತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ದಿನಾಂಕ 31 ರಂದು ಸಂಜೆ 5 ಗಂಟೆಗೆ ಗಣಿ, ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಸಮಾರೋಪ ಸಮಾರಂಭ ಹಾಗೂ ಸ್ಮರಣ ಸಂಚಿಕೆಯನ್ನು ಉದ್ಘಾಟಿಸುವರು. ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ ದೃಶ್ಯದರ್ಪಣ’ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡುವರು. ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande