ನವದೆಹಲಿ, 29 ಮೇ (ಹಿ.ಸ.) :
ಆ್ಯಂಕರ್ : ಆಪರೇಷನ್ ಸಿಂಧೂರ್ ಅನ್ನು ರಾಷ್ಟ್ರೀಯ ವಿಜಯವೆಂದು ಶ್ಲಾಘಿಸಿದ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ಪ್ರೀತ್ ಸಿಂಗ್, ರಕ್ಷಣಾ ಯೋಜನೆಗಳಲ್ಲಿ ನಡೆಯುತ್ತಿರುವ ನಿರಂತರ ವಿಳಂಬದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದು. ಯಾವುದೇ ಯೋಜನೆಯೂ ಸಮಯಕ್ಕೆ ಪೂರ್ಣಗೊಳ್ಳುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ನಡೆದ ಭಾರತೀಯ ಕೈಗಾರಿಕಾ ಒಕ್ಕೂಟದ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಯುದ್ಧದ ಸ್ವರೂಪ ಬದಲಾಗುತ್ತಿರುವ ಹಿನ್ನೆಲೆಯಲ್ಲಿ ತಂತ್ರಜ್ಞಾನ ಆಧಾರಿತ ಸ್ವಾವಲಂಬನೆ ಅವಶ್ಯಕವಾಗಿದೆ ಎಂದರು. ಭಾರತೀಯ ಕೈಗಾರಿಕೆಗಳ ಮೇಲೆ ಈಗ ವಿಶ್ವಾಸ ಬೆಳೆದಿದ್ದು, ಭವಿಷ್ಯದ ಯೋಜನೆಗಳಲ್ಲಿ ಖಾಸಗಿ ಕ್ಷೇತ್ರದ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅಭಿಪ್ರಾಯಪಟ್ಟರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa