ಅತಿಥಿ ಉಪನ್ಯಾಸಕ, ಶಿಕ್ಷಕರ ನೇಮಕಕ್ಕೆ ಜೂ.01ರಂದು ಪ್ರವೇಶ ಪರೀಕ್ಷೆ
ರಾಯಚೂರು, 29 ಮೇ (ಹಿ.ಸ.) : ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ನೇಮಕಾತಿ ಮಾಡುವ ಸಲುವಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದ್ದು, ಜೂನ್ 01ರಂದು ನಡೆಯುವ ಪರೀಕ್ಷಗೆ ಅಭ
ಅತಿಥಿ ಉಪನ್ಯಾಸಕ, ಶಿಕ್ಷಕರ ನೇಮಕಕ್ಕೆ ಜೂ.01ರಂದು ಪ್ರವೇಶ ಪರೀಕ್ಷೆ


ರಾಯಚೂರು, 29 ಮೇ (ಹಿ.ಸ.) :

ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರ ನೇಮಕಾತಿ ಮಾಡುವ ಸಲುವಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿದ್ದು, ಜೂನ್ 01ರಂದು ನಡೆಯುವ ಪರೀಕ್ಷಗೆ ಅಭ್ಯರ್ಥಿಗಳು ಪ್ರವೇಶ ಪತ್ರದೊಂದಿಗೆ ಹಾಜರಾಗಬಹುದಾಗಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ, ಬಡ್ತಿ, ವರ್ಗಾವಣೆ ಮೂಲಕ ಹುದ್ದೆ ಭರ್ತಿ ಮಾಡುವವರಿಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ, ಮೌಲಾನಾ ಆಜಾದ್ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರು ಹಾಗೂ ಡಾ.ಎಪಿಜೆ, ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ, ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು ಹಾಗೂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಅಹ್ವಾನಿಸಲಾಗಿದ್ದು, ಈ ಶಿಕ್ಷಕರು ಮತ್ತು ಉಪನ್ಯಾಸಕರನ್ನು ನಿಯಮಾನುಸಾರ ಆಯ್ಕೆ ಮಾಡುವ ಸಂಬಂಧ ಸಾಮಾನ್ಯ ಪರೀಕ್ಷೆಯನ್ನು ಜೂನ್ 01ರಂದು ನಡೆಸಲು ನಿಗದಿಗೊಳಸಲಾಗಿದೆ.

ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಜಿಲ್ಲಾ ಕಚೇರಿ ಹಾಗೂ ತಾಲ್ಲೂಕು ವಿಸ್ತರಣಾಧಿಕಾರಿಗಳು ಕಾರ್ಯಾಲಯ ಮಾನವಿ, ಸಿಂಧನೂರು, ಲಿಂಗಸೂಗೂರು ಹಾಗೂ ದೇವದುರ್ಗದಲ್ಲಿ ವಿತರಿಸಲಾಗುತ್ತಿದ್ದು, ಅಭ್ಯರ್ಥಿಗಳು 02 ಭಾವಚಿತ್ರಗಳೊಂದಿಗೆ ಪ್ರವೇಶ ಪತ್ರವನ್ನು ಮೇ.31ರ ಶನಿವಾರ ದೊಳಗಾಗಿ ಪಡೆದುಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ರಾಯಚೂರು ಮೊಬೈಲ್ ನಂ; 9731028420, ಮಾನವಿ, ಸಿರವಾರ ಮೊಬೈಲ್ ನಂ; 8867334785, ದೇವದುರ್ಗ ಮೊಬೈಲ್ ನಂ; 8884149056, ಲಿಂಗಸುಗೂರು, ಮಸ್ಕಿ ಮತ್ತು ಸಿಂಧನೂರು ಮೊಬೈಲ್ ನಂ; 9740871306, 8217621732 ಹಾಗೂ 8884977468ಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande