ಹೊಸಪೇಟೆ, 29 ಮೇ (ಹಿ.ಸ.) :
ಆ್ಯಂಕರ್ : ಸರ್ಕಾರದ ಆದೇಶದಂತೆ ಜಿಲ್ಲೆಯ ಒಂದು ಉಪನೋಂದಣಿ ಕಚೇರಿ ಪ್ರತಿ ಭಾನುವಾರ, 2ನೇ ಶನಿವಾರ ಹಾಗೂ 4ನೇ ಶನಿವಾರ ರಜಾದಿನಗಳಂದು ಕಾರ್ಯನಿರ್ವಹಿಸುವಂತೆ ಸೂಚಿಸಲಾಗಿದೆ. ರಜಾ ದಿನಗಳಂದು ಕಾರ್ಯನಿರ್ವಹಿಸಿದ ಉಪ ನೋಂದಣಿ ಕಚೇರಿ ಮಂಗಳವಾರದಂದು ರಜೆ ಘೋಷಿಸಲಾಗಿರುತ್ತದೆ.
ಜಿಲ್ಲೆಯ ಐದು ಉಪ ನೋಂದಣಿ ಕಚೇರಿ ಪೈಕಿ ಹೂವಿನಹಡಗಲಿ ಉಪ ನೋಂದಣಿ ಕಚೇರಿ ಜೂ.1 ರಂದು ಭಾನುವಾರದಂದು ಕಾರ್ಯ ನಿರ್ವಹಿಸುತ್ತದೆ. ಹಾಗೂ ಜಿಲ್ಲೆಯ ಇತರೆ ಉಪ ನೋಂದಣಿ ಕಚೇರಿಗಳು ಕಾರ್ಯನಿರ್ವಹಿಸುವ ರಜಾದಿನಗಳ ದಿನಾಂಕವನ್ನು ಇಲಾಖೆಯ ಕಚೇರಿ ನೋಟಿಸ್ ಬೋರ್ಡ್ನಲ್ಲಿ ಪ್ರಕಟಿಸಲಾಗಿರುತ್ತದೆ.
ರಜಾ ದಿನಗಳಂದು ಜಿಲ್ಲೆಯ ಎಲ್ಲಾ ತಾಲೂಕುಗಳ ಉಪ ನೋಂದಣಿ ಕಚೇರಿ ವ್ಯಾಪ್ತಿಯ ಸ್ವತ್ತುಗಳ ನೋಂದಣಿಯನ್ನು ಕಾರ್ಯನಿರ್ವಹಿಸುತ್ತಿರುವ ಕಚೇರಿಗಳಲ್ಲಿ ಮಾಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿಜಯನಗರ ಜಿಲ್ಲಾ ನೋಂದಣಾಧಿಕಾರಿ ಸೈಯದ್ ಖಾದರ್ ಕೊಪ್ಪಳ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್