ಬೆಂಗಳೂರು, 29 ಮೇ (ಹಿ.ಸ.) :
ಆ್ಯಂಕರ್ : ಮಂಗಳೂರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಬವರಾಜ ಬೊಮ್ಮಾಯಿ, ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಯಾರಿಗೂ ಪೊಲೀಸರ ಬಗ್ಗೆ ಭಯ ಇಲ್ಲದಂತಾಗಿದೆ. ಪೊಲೀಸ್ ಠಾಣೆಗಳು ಭ್ರಷ್ಟಾಚಾರದ ಕೇಂದ್ರಗಳಾಗಿವೆ. ಹೀಗಾಗಿ ಸಮಾಜ ಘಾತುಕ ಶಕ್ತಿಗಳು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿವೆ. ರಾಜ್ಯ ಸರ್ಕಾರದ ಓಲೈಕೆ ರಾಜಕಾರಣದಿಂದ ಜನರು ಸರ್ಕಾರದ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತಾಗಿದೆ ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa