ಹಾಸನ, 29 ಮೇ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿ ಘಾಟ್ನಲ್ಲಿ ಸಂಭವಿಸಿರುವ ರಸ್ತೆ ಹಾನಿ ಪ್ರದೇಶಗಳನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪರಿಶೀಲನೆ ನಡೆಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿಗಳಿಗೆ ಕೆಲವು ಕಟ್ಟುನಿಟ್ಟಿನ ಸೂಚನೆ ನೀಡಿದರು.
ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದೇ ಸತತವಾಗಿ ಮಣ್ಣು ಕುಸಿತಕ್ಕೆ ಪ್ರಮುಖ ಕಾರಣವಾಗಿದೆ. ಒಟ್ಟು 45 ಕಿಮೀ ನಲ್ಲಿ 35 ಕಿಮೀ ಹೆದ್ದಾರಿ ಕಾಮಗಾರಿ ಮುಗಿದಿದೆ. ಆದರೆ ಇಲ್ಲಿಯವರೆಗೂ ಸಂಪೂರ್ಣ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.
ಈ ವೇಳೆ ಶಾಸಕರಾದ ಶಿವಲಿಂಗೇಗೌಡರು, ಸಂಸದ ಶ್ರೇಯಸ್ ಪಟೇಲ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa