ಭಾಲ್ಕಿ, 29 ಮೇ (ಹಿ.ಸ.) :
ಆ್ಯಂಕರ್ : 2025–26ನೇ ಶೈಕ್ಷಣಿಕ ವರ್ಷದ ಆರಂಭದ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳು ಹಾಗೂ ಸಮವಸ್ತ್ರಗಳ ಸರಿಯಾದ ಪೂರೈಕೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಬೀದರ್ ಜಿಲ್ಲೆಯ ಭಾಲ್ಕಿಯ ಶೈಕ್ಷಣಿಕ ಸಾಮಗ್ರಿಗಳ ಸಂಗ್ರಹಣಾ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಯಾವುದೇ ವಿದ್ಯಾರ್ಥಿಯು ಪಠ್ಯಪುಸ್ತಕಗಳು ಅಥವಾ ಸಮವಸ್ತ್ರಗಳಿಂದ ವಂಚಿತರಾಗಬಾರದು. ಎಲ್ಲರಿಗೂ ಸಮಯಕ್ಕೆ ಸರಿಯಾಗಿ ಶಾಲಾ ಸಾಮಗ್ರಿಗಳು ಪೂರೈಕೆ ಆಗಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa