ಕೊಪ್ಪಳ, 29 ಮೇ (ಹಿ.ಸ.) :
ಆ್ಯಂಕರ್ : ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ಆಸ್ತಿ ಮಾಲೀಕರು, ಬೀದಿ ಬದಿ ವ್ಯಾಪಾರಸ್ಥರು ಅತಿಕ್ರಮಿಸಿರುವ ಸಾರ್ವಜನಿಕ ಆಸ್ತಿಗಳನ್ನು ತೆರವುಗೊಳಿಸುವಂತೆ ಸೂಚಿಸಲಾಗಿದೆ.
ನಗರಸಭೆ ವ್ಯಾಪ್ತಿಯ ಸಾರ್ವಜನಿಕ ರಸ್ತೆ ಹಾಗೂ ಪಾದಾಚಾರಿ ರಸ್ತೆಯನ್ನು ಅತಿಕ್ರಮಿಸಿ ವ್ಯಾಪಾರ ಮಾಡುತ್ತಿರುವ ಬೀದಿಬದಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕ ರಸ್ತೆ, ಉದ್ಯಾನವನ, ನಾಗರಿಕ ಸೌಲಭ್ಯ ಹಾಗೂ ಇನ್ನಿತರ ಯಾವುದೇ ಸರಕಾರಿ ಆಸ್ತಿ ಅತಿಕ್ರಮಿಸಿದ ಆಸ್ತಿ ಮಾಲೀಕರು 15 ದಿನಗಳೊಳಗೆ ಅತಿಕ್ರಮಣ ತೆರವುಗೊಳಿಸಬೇಕು.
ನಿಗದಿತ ಅವಧಿಯಲ್ಲಿ ಅತಿಕ್ರಮಣ ತೆರವುಗೊಳಿಸದೇ ಇದ್ದಲ್ಲಿ ನಗರಸಭೆಯಿಂದ ತೆರವುಗೊಳಿಸಲಾಗುವುದು ಹಾಗೂ ತೆರವುಗೊಳಿಸಲು ತಗುಲುವ ವೆಚ್ಚವನ್ನು ಸಂಬಂಧಿಸಿದವರಿಂದ ವಸೂಲಿ ಮಾಡಲಾಗುವುದು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್