ನವದೆಹಲಿ, 29 ಮೇ (ಹಿ.ಸ.) :
ಆ್ಯಂಕರ್ : ಸಿಕ್ಕಿಂ ರಾಜ್ಯ ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡು 50 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನರ ಪ್ರಗತಿ ಮತ್ತು ನಂಬಿಕೆಯನ್ನು ಶ್ಲಾಘಿಸಿದರು. ಗ್ಯಾಂಗ್ಟಾಕ್ನಲ್ಲಿ ನಡೆದ ಕಾರ್ಯಕ್ರಮಕ್ಕೆ ಅವರು ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪ್ರಧಾನಿ ಮೋದಿ, ಪಹಲ್ಗಾಮ್ ದಾಳಿಯನ್ನು ಮಾನವೀಯತೆಯ ಮೇಲಿನ ಹಲ್ಲೆ ಎಂದಿದ್ದು, ಭಾರತವು 'ಆಪರೇಷನ್ ಸಿಂಧೂರ್' ಮೂಲಕ ಭಯೋತ್ಪಾದಕರಿಗೆ ಪ್ರಬಲ ಉತ್ತರ ನೀಡಿದೆ ಎಂದು ಹೇಳಿದರು.
ಅವರು ಸಿಕ್ಕಿಂನನ್ನು ಜಾಗತಿಕ ಪ್ರವಾಸಿ ತಾಣವನ್ನಾಗಿ ಪರಿಗಣಿಸುವ ಯೋಜನೆಯು ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ರಾಜ್ಯವು ಸಾಹಸ, ಕ್ರೀಡಾ, ಸಾಂಸ್ಕೃತಿಕ ಹಾಗೂ ಸಮ್ಮೇಳನ ಪ್ರವಾಸೋದ್ಯಮದಲ್ಲಿ ವಿಶಾಲ ಸಾಧ್ಯತೆಗಳನ್ನು ಹೊಂದಿದೆ ಎಂದು ಹೇಳಿದರು.
ಇದೇ ವೇಳೆ ಸಿಕ್ಕಿಂನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa