ಕೋಲಾರ, ೨೯ ಮೇ (ಹಿ.ಸ) ಆಂಕರ್ : ಬೇಸಿಗೆಯ ರಜೆಯ ಮಜಾ ಮುಗಿಸಿ ಮೇ.೩೦ ರಿಂದ ಶಾಲೆಯತ್ತ ಜಿಲ್ಲೆಯಲ್ಲಿ ಸುಮಾರು ೨.೧೩ ಲಕ್ಷ ಚಿಣ್ಣರು ಹೆಜ್ಜೆ ಹಾಕಲಿರುವ ಚಿಣ್ಣರನ್ನು ಸ್ವಾಗತಿಸಲು ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ದತೆ ನಡೆಸಿದೆ. ಮೇ.೨೯ ರಂದೇ ಶಿಕ್ಷಕರು ಶಾಲೆಯಲ್ಲಿ ಹಾಜರಿದ್ದು, ಶಾಲಾಕೊಠಡಿ,ಆವರಣ,ಶೌಚಾಲಯ,ಅಡುಗೆ ಮನೆ ಸ್ವಚ್ಚತೆಯೊಂದಿಗೆ ಜಿಲ್ಲೆಯ ೨೫೩೮ ಶಾಲೆಗಳಲ್ಲಿ ಪ್ರಾರಂಭೋತ್ಸವಕ್ಕೆ ಸಿದ್ದತೆ ನಡೆಸಿದ್ದು, ಮೇ.೩೦ ರಂದು ಮಕ್ಕಳನ್ನು ಸ್ವಾಗತಿಸಿ ಹಬ್ಬದ ವಾತಾವರಣ ಸೃಷ್ಟಿಸುವಂತೆ ಸೂಚಿಸಲಾಗಿದೆ ಎಂದು ಡಿಡಿಪಿಐ ಕೃಷ್ಣಮೂರ್ತಿ ತಿಳಿಸಿದರು.
ಈ ಕುರಿತು ಮಾಹಿತಿ ನೀಡಿರುವ ಅವರು, ಶಾಲಾ ಆರಂಭಕ್ಕಾಗಿ ಕೈಗೊಳ್ಳಬೇಕಾದ ಸಿದ್ದತೆಗಳ ಕುರಿತು ಈಗಾಗಲೇ ಮುಖ್ಯಶಿಕ್ಷಕರ ಸಭೆ ಕರೆದು ಸೂಕ್ತ ನಿರ್ದೇಶನ ನೀಡಲಾಗಿದೆ, ಶಾಲಾ ಆರಂಭೋತ್ಸವವನ್ನು ಹಬ್ಬದಂತೆ ಆಚರಿಸುತ್ತದ್ದು, ಮಕ್ಕಳಿಗೆ ಆಹ್ಲಾದಕರ ವಾತಾವರಣ ಸೃಷ್ಟಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಕಲಿಕೆ,ಪರೀಕ್ಷೆ,ಫಲಿತಾಂಶದ ನಂತರ ಸಿಕ್ಕ ವಾರ್ಷಿಕ ಬೇಸಿಗೆ ರಜೆ ಮುಗಿಸಿ ಇದೀಗ ಶಾಲೆಗಳತ್ತ ಮುಖ ಮಾಡಿರುವ ಚಿಣ್ಣರು, ಹೊಸ ಪಠ್ಯಪುಸ್ತಕಗಳನ್ನು ಪಡೆದು ಮತ್ತೆ ಕಲಿಕೆಯಲ್ಲಿ ಮಗ್ನರಾಗಲು ಸಿದ್ದರಾಗಿದ್ದು, ಶಾಲಾ ಆರಂಭದ ದಿನವೇ ಮಕ್ಕಳಿಗೆ ಹೊಸ ಪಠ್ಯಪುಸ್ತಕ, ವಿತರಿಸಲು ಇಲಾಖೆ ಸಕಲ ಸಿದ್ದತೆ ನಡೆಸಿದೆ ಎಂದು ತಿಳಿಸಿದರು.
ಮಕ್ಕಳ ವ್ಯಾಸಂಗದ ಅವಧಿಯಲ್ಲಿ ಶಾಲಾ ಪ್ರಾರಂಭದ ದಿನವನ್ನು ಮಕ್ಕಳ ಮನಸ್ಸಿನಲ್ಲಿ ಸ್ಥಿರವಾಗಿ ನಿಲ್ಲುವ ರೀತಿ ಹಬ್ಬದಂತೆ ಆಚರಿಸಿ ಅವರಲ್ಲಿ ಆಹ್ಲಾದಕರ ವಾತಾವರಣ ಸೃಷ್ಟಿಸುವುದೇ ಶಿಕ್ಷಣ ಇಲಾಖೆ ಉದ್ದೇಶವಾಗಿದ್ದು, ಮಕ್ಕಳನ್ನು ಶಾಲೆಗಳತ್ತ ಸೆಳೆಯುವ ಕೆಲಸ ಮಾಡುತ್ತಿರುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ೧ ರಿಂದ ೭ನೇ ತರಗತಿವರೆಗಿನ ಸರ್ಕಾರಿ ಪ್ರಾಥಮಿಕ ಶಾಲೆಗಳು ಒಟ್ಟು ೧೭೯೮ ಇವೆ, ಹಾಗೂ ೧೨೪ ಸರ್ಕಾರಿ ಪ್ರೌಢಶಾಲೆಗಳಿದ್ದು, ಇಲಾಖೆ ಮಾರ್ಗಸೂಚಿಯಂತೆ ಶಾಲೆಗಳಿಗೆ ತಳಿರು ತೋರಣಗಳಿಂದ ಅಲಂಕರಿಸಿ ಮಕ್ಕಳನ್ನು ಶಾಲೆಗೆ ಆಹ್ವಾನಿಸಲು ಸಿದ್ದತೆ ನಡೆಸಲು ಸೂಚಿಸಲಾಗಿದೆ ಎಂದರು.
ಉಳಿದಂತೆ ಅನುದಾನಿತ ೪೪ ಪ್ರಾಥಮಿಕ ಹಾಗೂ ೫೯ ಪ್ರೌಢಶಾಲೆಗಳು, ಅನುದಾನರಹಿತ ಖಾಸಗಿಯ ೩೦೮ ಪ್ರಾಥಮಿಕ ಹಾಗೂ ೨೦೫ ಪ್ರೌಢಶಾಲೆಗಳು ಸೇರಿದಂತೆ ಒಟ್ಟು ೨೫೩೮ ಶಾಲೆಗಳು ಜಿಲ್ಲೆಯಲ್ಲಿದ್ದು, ಸುಮಾರು ೨,೧೩,೩೨೬ ಚಿಣ್ಣರು ಕಲಿಕೆಯಲ್ಲಿ ತೊಡಗಿದ್ದಾರೆ. ಈ ಎಲ್ಲಾ ಶಾಲೆಗಳಲ್ಲೂ ಶಾಲಾ ಪ್ರಾರಂಭೋತ್ಸವಕ್ಕೆ ಸೂಚನೆ ನೀಡಿರುವುದಾಗಿ ತಿಳಿಸಿದರು.
ಇವುಗಳ ಜತೆಗೆ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ ೧೬ ಮೊರಾರ್ಜಿದೇಸಾಯಿ, ೪ ಕಿತ್ತೂರು ರಾಣಿ ಚೆನ್ನಮ್ಮ, ೩ ಅಂಬೇಡ್ಕರ್ ಹಾಗೂ ೧ ಏಕಲವ್ಯ ವಸತಿ ಶಾಲೆಗಳಿದ್ದು, ಇಲ್ಲಿಯೂ ೧೨೦೦ಕ್ಕೂ ಹೆಚ್ಚು ಮಕ್ಕಳು ಶಾಲೆಯತ್ತ ಮೇ.೩೧ ರಂದು ಆಗಮಿಸಲಿದ್ದಾರೆ.
ಇದರ ಜತೆಗೆ ಶ್ರೀನಿವಾಸಪುರ, ಬಂಗಾರಪೇಟೆ, ಮುಳಬಾಗಿಲು ತಾಲ್ಲೂಕುಗಳಲ್ಲಿ ತಲಾ ಒಂದೊ0ದು ಕಸ್ತೂರಿ ಬಾ ಶಾಲೆ ಹಾಗೂ ಆದರ್ಶ ಶಾಲೆಗಳು ಇದ್ದು, ಅವುಗಳಲ್ಲೂ ಸಹಾ ಮೇ.೨೯ ರಂದು ಸಿದ್ದತೆ ನಡೆಸಿ ಮೇ.೩೦ ರಂದೇ ಶಾಲಾ ಪ್ರಾರಂಭೋತ್ಸವ ಆಚರಿಸಲು ಸೂಚಿಸಲಾಗಿದೆ ಎಂದರು.
ಪ್ರಾರAಭೋತ್ಸವದAದು ಶಾಲಾ ಆವರಣ, ಕೊಠಡಿಗಳನ್ನು ಸ್ವಚ್ಚಗೊಳಿಸುವುದು, ಕುಡಿಯಲು ನೀರು ಒದಗಿಸುವುದು, ಶೌಚಾಲಯವನ್ನು ಸುಸ್ಥಿತಿಯಲ್ಲಿಡುವುದು, ಬಿಸಿಯೂಟದ ಅಡುಗೆ ಮನೆ ಸ್ವಚ್ಚತೆ, ಹಾಗೂ ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸುವ ಕಾರ್ಯ ಮಾಡುವಂತೆ ಸೂಚಿಸಲಾಗಿದೆ.
ಒಂದನೇ, ಆರನೇ ಹಾಗೂ ೮ನೇ ತರಗತಿಗೆ ಸೇರುವ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭದ ದಿನ ಆಹ್ಲಾದಕರ ಸಂದರ್ಭವಾಗಿರುವAತೆ ಶಿಕ್ಷಕರು ಗಮನಹರಿಸಬೇಕು, ಇದು ಮಕ್ಕಳ ವ್ಯಾಸಂಗದ ಅವಧಿಯಲ್ಲಿ ಲವಲವಿಕೆಯಿಂದ ಕಳೆಯಲು ಪ್ರೇರಣೆ ನೀಡುತ್ತದೆ ಎಂದು ಇಲಾಖೆ ಸೂಚಿಸಿದೆ ಎಂದರು.
ಶಾಲಾ ಹಬ್ಬಕ್ಕೆ ಶಾಲಾಭಿವೃದ್ದಿ ಸಮಿತಿ ಸದಸ್ಯರು, ಪೋಷಕರು, ಗ್ರಾಮದ ಗಣ್ಯರನ್ನು ಕರೆಸಿ ಶಾಲಾ ಹಬ್ಬವನ್ನು ಸಡಗರದಿಂದ ಆಚರಿಸಬೇಕು ಮತ್ತು ಅಂದು ಮಕ್ಕಳಿಗೆ ಸಿಹಿ ಹಂಚುವುದು ಜತೆಗೆ ಇಲಾಖೆ ನೀಡಿರುವ ಪಠ್ಯಪುಸ್ತಕ, ಸಮವಸ್ತç ಮೊದಲ ದಿನವೇ ವಿತರಿಸಲು ಸೂಚಿಸಲಾಗಿದೆ.
ಈ ನಡುವೆ ಇಲಾಖೆ ಮಿಂಚಿನ ಸಂಚಾರಕ್ಕಾಗಿ ಅಧಿಕಾರಿಗಳ ತಂಡಗಳನ್ನು ರಚಿಸಿದ್ದು, ಜೂ.೧ ರಿಂದ ೧೫ ರವರೆಗೂ ತಂಡಗಳು ದಿಢೀರ್ ಶಾಲೆಗಳಿಗೆ ಭೇಟಿ ನೀಡಲಿವೆ, ಶಾಲೆಗಳಲ್ಲಿ ಶಾಲಾ ಆರಂಭೋತ್ಸವ ಮಾಡಿರುವ ಕುರಿತು, ಪಠ್ಯಪುಸ್ತಕ,ಬಟ್ಟೆ ವಿತರಣೆ ಕುರಿತು ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಯಾವುದೇ ಶಾಲೆಯನ್ನು ಮುಚ್ಚುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ಜೂ.೧೫ ರವರೆಗೂ ದಾಖಲಾತಿ ಆಂದೋಲನ ನಡೆಸಲು ಸೂಚಿಸಲಾಗಿದೆ, ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಇಲಾಖೆ ಬದ್ದವಾಗಿದ್ದು, ಯಾವುದೇ ಶಾಲೆ ಮುಚ್ಚುವ ಆಲೋಚನೆ ನಮ್ಮ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಜತೆಗೆ ಶಾಲೆಗಳಲ್ಲಿ ಕೋವಿಡ್ ಮುನ್ನಚ್ಚರಿಕಾ ಕ್ರಮಗಳನ್ನು ಪಾಲಿಸಲು ಸೂಚಿಸಿದ್ದು, ಸ್ವಚ್ಚತೆ,ಮಕ್ಕಳ ಸ್ವಾಗತ, ಶೈಕ್ಷಣಿಕ ಬಲವರ್ಧನೆಗೆ ಎಸ್ಡಿಎಂಸಿ, ಪೋಷಕರ ಸಭೆ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಚಿತ್ರ : ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್